Featured

ಮಹಾತ್ಮ ಗಾಂಧೀಜಿ ಯವರು ಈಗ ಬದುಕಿರುತ್ತಿದ್ದರೆ ಎನ್‌ಆರ್‌ಸಿ ವಿರೋಧಿಸಿ ಸತ್ಯಾಗ್ರಹ ನಡೆಸುತ್ತಿದ್ದರು : ಪ್ರೊ.ಗಣೇಶ್‌ ಎನ್‌.ದೇವಿ

ಮಂಗಳೂರು: ಮಹಾತ್ಮ ಗಾಂಧೀಜಿ ಯವರು ಈಗ ಬದುಕಿರುತ್ತಿದ್ದರೆ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರೋಧಿಸಿ ಸತ್ಯಾಗ್ರಹ ನಡೆಸುತ್ತಿದ್ದರು. ಕಸ್ತೂರ ಬಾ ಅವರೂ ಹೋರಾಟದಲ್ಲಿ ಜತೆಯಾಗಿರುತ್ತಿದ್ದರು ಎಂದು ಗಾಂಧಿವಾದಿ, ಚಿಂತಕ ಪ್ರೊ.ಗಣೇಶ್‌ ಎನ್‌.ದೇವಿ ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ನೆಹರೂ ಅಧ್ಯಯನ ಕೇಂದ್ರದ ವತಿಯಿಂದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ‘ಗಾಂಧಿಯವರ ಸಂಭಾಷಣೆಗಳು’ ಕುರಿತ ವಿಚಾರ ಸಂಕಿರಣದಲ್ಲಿ ‘ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯ’ ವಿಷಯ ಕುರಿತು ಅವರು ಮಾತನಾಡಿದರು.

ಲಿಂಗ, ಧರ್ಮ, ಜಾತಿ, ವರ್ಗಗಳ ಭೇದವಿಲ್ಲದೆ ಸತ್ಯ ಮತ್ತು ಅಹಿಂಸೆಯ ಹೋರಾಟಗಳಿಂದ ಮಾತ್ರವೇ ಪ್ರಜಾಪ್ರಭುತ್ವವನ್ನು ಕಾಪಾಡಲು ಸಾಧ್ಯ. ಎಲ್ಲರನ್ನೂ ಒಳಗೊಳ್ಳುವ ಪ್ರಜಾಪ್ರಭುತ್ವವನ್ನು ಗಾಂಧೀಜಿ ಬಯಸಿದ್ದರು. ಆದರೆ, ಕೇಂದ್ರ ಸರ್ಕಾರವು ಎನ್‌ಆರ್‌ಸಿ ಮೂಲಕ ಮುಸ್ಲಿಮರು ಮತ್ತು ಯೆಹೂದಿಗಳು ದೇಶದಲ್ಲಿ ಆಶ್ರಯ ಪಡೆಯುವ ಅವಕಾಶ ನಿರಾಕರಿಸಲು ಹೊರಟಿದೆ. ಇದು ಗಾಂಧೀಜಿಯವರು ಪ್ರತಿಪಾದಿಸಿದ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ನಡೆ ಎಂದರು.

ಅಹಿಂಸೆ ಮತ್ತು ಸತ್ಯದ ಬುನಾದಿಯ ಮೇಲೆ ನಡೆಸಿದ ಹೋರಾಟವನ್ನು ಗಾಂಧೀಜಿಯವರು ಎಂದೂ ರಾಜಕೀಯ ತತ್ವವಾಗಿ ಕಂಡಿರಲಿಲ್ಲ. ಅಹಿಂಸೆಯನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಆಳುವವರನ್ನು ಪ್ರಶ್ನಿಸುತ್ತಿದ್ದರು. ಸತ್ಯವನ್ನು ಹೇಳುವ ಮೂಲಕ ಆ ಕಾಲಘಟ್ಟದ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುತ್ತಿದ್ದರು. ದ್ವೇಷ, ತಾರತಮ್ಯ, ಕೋಮುಸಂಘರ್ಷ ರಹಿತ ಪ್ರಜಾಪ್ರಭುತ್ವವನ್ನು ಅವರು ಬಯಸಿದ್ದರು ಎಂದು ಹೇಳಿದರು.

ರಾಜಕೀಯ ವಿಶ್ಲೇಷಕ ಪ್ರೊ.ವಲೇರಿಯನ್ ರಾಡ್ರಿಗಸ್, ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಇಂಗ್ಲಿಷ್‌ ವಿಭಾಗದ ಪ್ರಾಧ್ಯಾಪಕ ಪ್ರೊ.ಪಟ್ಟಾಭಿರಾಮ ಸೋಮಯಾಜಿ ಎಚ್., ಪ್ರಾಂಶುಪಾಲ ಡಾ. ಉದಯ ಕುಮಾರ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago