ಮಹಾಬಲಿಪುರಂ : ಮಹಾಬಲಿಪರಂ ಬೀಚ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಸ್ವತಃ ಸ್ವಚ್ಚ ಭಾರತ ಅಭಿಯಾನವನ್ನು ಕೈಗೊಂಡ ವಿಡಿಯೋವನ್ನು ಟ್ವೀಟ್ ಮಾಡಿರುವ ಪಿಎಂ ಮೋದಿ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಚ ಮತ್ತು ಅಚ್ಚುಕಟ್ಟಾಗಿರಿಸುವಂತೆ ಸೂಚನೆ ನೀಡಿದ್ದಾರೆ . ಅದರ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕೆಂದು ತಿಳಿಸಿದ್ದಾರೆ.
ಈ ಕುರಿತ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಅವರು, ಸಂಗ್ರಹಿಸಲಾದ ಕಸವನ್ನು ಹೋಟೆಲ್ನ ಸಿಬ್ಬಂದಿ ಜಯರಾಜ್ ಅವರಿಗೆ ನೀಡಿದ್ದಾಗಿ ತಿಳಿಸಿದ್ದಾರೆ. ಅಲ್ಲದೇ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಕಾರ್ಯವನ್ನು ಮಾಡೋಣ, ಸದೃಡ ಆರೋಗ್ಯವನ್ನು ಪಡೆಯೋಣ ಎಂದಿದ್ದಾರೆ.
ವಿಡಿಯೋದಲ್ಲಿ ಮೋದಿ ಅವರು, ಸಮುದ್ರದ ಮರಳಿನ ಮೇಲೆ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿ, ಚೀಲ ಹಾಗೂ ಚಪ್ಪಲಿಗಳನ್ನು ತೆಗೆದು ದೊಡ್ಡ ಪ್ಲಾಸ್ಟಿಕ್ ಚೀಲದಲ್ಲಿ ಸಂಗ್ರಹಿಸುತ್ತಿರುವುದನ್ನು ಕಾಣಬಹುದಾಗಿದೆ. ಪ್ರಧಾನಿಗಳ ಈ ವಿಡಿಯೋವನ್ನು ಇದುವರೆಗೂ ಸುಮಾರು 60 ಸಾವಿರ ಮಂದಿ ಲೈಕ್ ಮಾಡಿದ್ದು, 18 ಸಾವಿರಕ್ಕೂ ಹೆಚ್ಚು ಮಂದಿ ಟ್ವಿಟನ್ನು ರಿಟ್ವೀಟ್ ಮಾಡಿದ್ದಾರೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…