ಮಹಾಬಲಿಪುರಂ : ಮಹಾಬಲಿಪರಂ ಬೀಚ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಸ್ವತಃ ಸ್ವಚ್ಚ ಭಾರತ ಅಭಿಯಾನವನ್ನು ಕೈಗೊಂಡ ವಿಡಿಯೋವನ್ನು ಟ್ವೀಟ್ ಮಾಡಿರುವ ಪಿಎಂ ಮೋದಿ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಚ ಮತ್ತು ಅಚ್ಚುಕಟ್ಟಾಗಿರಿಸುವಂತೆ ಸೂಚನೆ ನೀಡಿದ್ದಾರೆ . ಅದರ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕೆಂದು ತಿಳಿಸಿದ್ದಾರೆ.
ಈ ಕುರಿತ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಅವರು, ಸಂಗ್ರಹಿಸಲಾದ ಕಸವನ್ನು ಹೋಟೆಲ್ನ ಸಿಬ್ಬಂದಿ ಜಯರಾಜ್ ಅವರಿಗೆ ನೀಡಿದ್ದಾಗಿ ತಿಳಿಸಿದ್ದಾರೆ. ಅಲ್ಲದೇ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಕಾರ್ಯವನ್ನು ಮಾಡೋಣ, ಸದೃಡ ಆರೋಗ್ಯವನ್ನು ಪಡೆಯೋಣ ಎಂದಿದ್ದಾರೆ.
ವಿಡಿಯೋದಲ್ಲಿ ಮೋದಿ ಅವರು, ಸಮುದ್ರದ ಮರಳಿನ ಮೇಲೆ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿ, ಚೀಲ ಹಾಗೂ ಚಪ್ಪಲಿಗಳನ್ನು ತೆಗೆದು ದೊಡ್ಡ ಪ್ಲಾಸ್ಟಿಕ್ ಚೀಲದಲ್ಲಿ ಸಂಗ್ರಹಿಸುತ್ತಿರುವುದನ್ನು ಕಾಣಬಹುದಾಗಿದೆ. ಪ್ರಧಾನಿಗಳ ಈ ವಿಡಿಯೋವನ್ನು ಇದುವರೆಗೂ ಸುಮಾರು 60 ಸಾವಿರ ಮಂದಿ ಲೈಕ್ ಮಾಡಿದ್ದು, 18 ಸಾವಿರಕ್ಕೂ ಹೆಚ್ಚು ಮಂದಿ ಟ್ವಿಟನ್ನು ರಿಟ್ವೀಟ್ ಮಾಡಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…