Featured

ಮಹಾಭಾರತದ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ಹೃದಯಾಘಾತದಿಂದ ನಿಧನ – Vishwanews24

ಮಹಾಭಾರತದ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ಹೃದಯಾಘಾತದಿಂದ ನಿಧನ – Vishwanews24

ನವದೆಹಲಿ: ದೂರದರ್ಶನ ವಾಹಿನಿಯಲ್ಲಿ 1988ರಲ್ಲಿ ಆರಂಭಗೊಂಡಿದ್ದ ಮಹಾಭಾರತ ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ. ಅದರಲ್ಲಿ ನಟಿಸಿದ್ದ ನಟರನ್ನೇ ನಿಜವಾದ ‘ದೇವರು’ ಎಂದುಕೊಂಡವರಿಗೂ ಕಮ್ಮಿಯೇನಿಲ್ಲ. ಅಂಥವರಲ್ಲಿ ಒಬ್ಬರಾಗಿದ್ದುದು ಭೀಮನ ಪಾತ್ರದ ಮೂಲಕ ಮನೋಜ್ಞ ಅಭಿನಯ ನೀಡಿದ್ದ ನಟ ಪ್ರವೀಣ್ ಕುಮಾರ್ ಸೋಬ್ತಿ.

ದೀರ್ಘಕಾಲದ ಎದೆ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ ಪ್ರವೀಣ್‌ ಅವರು ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ನವದೆಹಲಿಯ ಅಶೋಕ್ ವಿಹಾರ್ ನಿವಾಸದಲ್ಲಿ ಇವರು ಕೊನೆಯುಸಿರೆಳೆದಿದ್ದಾರೆ.

ಇವರು ನಟ ಮಾತ್ರವಲ್ಲದೇ ಕ್ರೀಡಾಪಟುಗಳು. ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದು ಖ್ಯಾತಿ ಪಡೆದಿದ್ದರು. ಸೋಮವಾರ ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ವೈದ್ಯರನ್ನು ಮನೆಗೆ ಕರೆಸಲಾಗಿತ್ತು. ಆದರೆ ಅದೇ ವೇಳೆಗಾಗಲೇ ಅವರು ಮೃತಪಟ್ಟಿದ್ದರು.

ಪ್ರವೀಣ್ ಅವರು, ಹ್ಯಾಮರ್ ಮತ್ತು ಡಿಸ್ಕಸ್ ಥ್ರೋನಲ್ಲಿ ವಿವಿಧ ಅಥ್ಲೆಟಿಕ್ ಈವೆಂಟ್‌ಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದರು. 1966 ಮತ್ತು 1970ರಲ್ಲಿ ಎರಡು ಚಿನ್ನದ ಪದಕಗಳನ್ನು ಒಳಗೊಂಡಂತೆ ಏಷ್ಯನ್ ಗೇಮ್ಸ್‌ನಲ್ಲಿ ನಾಲ್ಕು ಪದಕ ಗೆದ್ದಿದ್ದರು. ಅವರು 1966ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಅವರು ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕ ಗಳಿಸಿದ್ದರು. ಇವರಿಗೆ ಪತ್ನಿ, ಮಗಳು, ಇಬ್ಬರು ತಮ್ಮಂದಿರು ಮತ್ತು ಅಕ್ಕ ಇದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

16 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

16 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

17 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

17 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

17 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

17 hours ago