Featured

ಮಹಾಭಾರತದ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ಹೃದಯಾಘಾತದಿಂದ ನಿಧನ – Vishwanews24

ಮಹಾಭಾರತದ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ಹೃದಯಾಘಾತದಿಂದ ನಿಧನ – Vishwanews24

ನವದೆಹಲಿ: ದೂರದರ್ಶನ ವಾಹಿನಿಯಲ್ಲಿ 1988ರಲ್ಲಿ ಆರಂಭಗೊಂಡಿದ್ದ ಮಹಾಭಾರತ ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ. ಅದರಲ್ಲಿ ನಟಿಸಿದ್ದ ನಟರನ್ನೇ ನಿಜವಾದ ‘ದೇವರು’ ಎಂದುಕೊಂಡವರಿಗೂ ಕಮ್ಮಿಯೇನಿಲ್ಲ. ಅಂಥವರಲ್ಲಿ ಒಬ್ಬರಾಗಿದ್ದುದು ಭೀಮನ ಪಾತ್ರದ ಮೂಲಕ ಮನೋಜ್ಞ ಅಭಿನಯ ನೀಡಿದ್ದ ನಟ ಪ್ರವೀಣ್ ಕುಮಾರ್ ಸೋಬ್ತಿ.

ದೀರ್ಘಕಾಲದ ಎದೆ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ ಪ್ರವೀಣ್‌ ಅವರು ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ನವದೆಹಲಿಯ ಅಶೋಕ್ ವಿಹಾರ್ ನಿವಾಸದಲ್ಲಿ ಇವರು ಕೊನೆಯುಸಿರೆಳೆದಿದ್ದಾರೆ.

ಇವರು ನಟ ಮಾತ್ರವಲ್ಲದೇ ಕ್ರೀಡಾಪಟುಗಳು. ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದು ಖ್ಯಾತಿ ಪಡೆದಿದ್ದರು. ಸೋಮವಾರ ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ವೈದ್ಯರನ್ನು ಮನೆಗೆ ಕರೆಸಲಾಗಿತ್ತು. ಆದರೆ ಅದೇ ವೇಳೆಗಾಗಲೇ ಅವರು ಮೃತಪಟ್ಟಿದ್ದರು.

ಪ್ರವೀಣ್ ಅವರು, ಹ್ಯಾಮರ್ ಮತ್ತು ಡಿಸ್ಕಸ್ ಥ್ರೋನಲ್ಲಿ ವಿವಿಧ ಅಥ್ಲೆಟಿಕ್ ಈವೆಂಟ್‌ಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದರು. 1966 ಮತ್ತು 1970ರಲ್ಲಿ ಎರಡು ಚಿನ್ನದ ಪದಕಗಳನ್ನು ಒಳಗೊಂಡಂತೆ ಏಷ್ಯನ್ ಗೇಮ್ಸ್‌ನಲ್ಲಿ ನಾಲ್ಕು ಪದಕ ಗೆದ್ದಿದ್ದರು. ಅವರು 1966ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಅವರು ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕ ಗಳಿಸಿದ್ದರು. ಇವರಿಗೆ ಪತ್ನಿ, ಮಗಳು, ಇಬ್ಬರು ತಮ್ಮಂದಿರು ಮತ್ತು ಅಕ್ಕ ಇದ್ದಾರೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago