ಮಹಾಮಾರಿ ಕೊರೊನಾ ಹಿನ್ನೆಲೆ : ಅತಿ ದೊಡ್ಡ ರಿಯಾಲಿಟಿ ಶೋ ಕನ್ನಡ ಬಿಗ್‍ಬಾಸ್ ಈ ವರ್ಷ ಪ್ರಸಾರವಾಗಲ್ಲ -Vishwanews24

ಮಹಾಮಾರಿ ಕೊರೊನಾ ಹಿನ್ನೆಲೆ : ಅತಿ ದೊಡ್ಡ ರಿಯಾಲಿಟಿ ಶೋ ಕನ್ನಡ ಬಿಗ್‍ಬಾಸ್ ಈ ವರ್ಷ ಪ್ರಸಾರವಾಗಲ್ಲ -Vishwanews24

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಭಾರಿ ಸುದ್ದಿ ಮಾಡುತ್ತಿದ್ದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಈ ಬಾರಿ ಪ್ರಸಾರವಾಗಲ್ಲ. ಖಚಿತ ಮಾಹಿತಿಯ ಪ್ರಕಾರ ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಬಿಗ್‍ಬಾಸ್ ಆರಂಭವಾಗಲ್ಲ ಎಂದು ಹೇಳಲಾಗುತ್ತಿದೆ.

ಈಗಾಗಲೇ ತೆಲುಗಿನಲ್ಲಿ ಬಿಗ್‍ಬಾಸ್ ಸೀಸನ್ 4 ಆರಂಭವಾಗಿದೆ. ಹಿಂದಿಯಲ್ಲಿ ಹೊಸ ಆವೃತ್ತಿಗೆ ಎಲ್ಲ ತಯಾರಿ ನಡೆಯುತ್ತಿದ್ದು, ಅಕ್ಟೋಬರ್‌ನಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಆದರೆ ಕನ್ನಡದಲ್ಲಿ ಈ ವರ್ಷ ಅಂದರೆ 2020ರಲ್ಲಿ ಬಿಗ್‍ಬಾಸ್ ನಡೆಯುವುದಿಲ್ಲ ಎಂಬ ಸುದ್ದಿ ಪ್ರಕಟವಾಗಿದೆ.

ಖಾಸಗಿ ವಾಹಿನಿಯಲ್ಲಿ ಪ್ರತಿವರ್ಷ ಸೆಪ್ಟೆಂಬರ್ ತಿಂಗಳಿನಿಂದ ಬಿಗ್‍ಬಾಸ್ ಆರಂಭವಾಗುತ್ತಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ತಿಂಗಳಲ್ಲಿ ಬಿಗ್‍ಬಾಸ್ ಸೀಸನ್ 8 ಆರಂಭವಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಶೋ ಶುರು ಮಾಡಲು ಸಾಧ್ಯವಾಗಿಲ್ಲ.

ಮಾಹಿತಿ ಪ್ರಕಾರ, ಇನ್ನು ಆರು ತಿಂಗಳು ತಡವಾಗಿ ಬಿಗ್‍ಬಾಸ್ ಶುರುವಾಗಲಿದೆ ಎನ್ನಲಾಗುತ್ತಿದೆ. ಅಂದರೆ ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಬಿಗ್‍ಬಾಸ್ ಸೀಸನ್ 8 ಶುರುವಾಗಲಿದೆ. ಹೀಗಾಗಿ ಸದ್ಯಕ್ಕೆ 2020ರಲ್ಲಿ ಬಿಗ್‍ಬಾಸ್ ಶೋ ಪ್ರಸಾರವಾಗಲ್ಲ. ಕಿಚ್ಚ ಸುದೀಪ್ ನಿರೂಪಣೆ ಮಾಡುತ್ತಿದ್ದ ಬಿಗ್‍ಬಾಸ್ ಶೋ ತುಂಬಾ ಜನಮನ್ನಣೆ ಗಳಿಸಿತ್ತು. ಆದರೆ ಈಗ ಬಿಗ್‍ಬಾಸ್ ಪ್ರಿಯರಿಗೆ ಇದರಿಂದ ಬೇಸರವಾಗುವ ಸಾಧ್ಯತೆಯಿದೆ.

ಸದ್ಯದ ಸಿನಿಮಾ ಶೂಟಿಂಗ್, ಧಾರಾವಾಹಿ ಚಿತ್ರೀಕರಣ, ರಿಯಾಲಿಟಿ ಶೋ ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ. ಹಾಗಾಗಿ ಬಿಗ್‍ಬಾಸ್ ಸಹ ಆರಂಭವಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಈ ವರ್ಷ ಬಿಗ್‍ಬಾಸ್ ನಡೆಯಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತ ಬಿಗ್ ಬಾಸ್ ಶೋ ನಿರೂಪಣೆ ಮಾಡುತ್ತಿದ್ದ ಕಿಚ್ಚ ಸುದೀಪ್ ಸಹ ಸಿನಿಮಾ ಚಿತ್ರೀಕರಣಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯಕ್ಕೆ ಹೈದರಾಬಾದ್‍ನಲ್ಲಿ ‘ಫ್ಯಾಂಟಮ್’ ಸಿನಿಮಾ ಚಿತ್ರೀಕರಣ ಮಾಡುತ್ತಿದ್ದಾರೆ. ಮತ್ತೊಂದೆಡೆ ‘ಕೋಟಿಗೊಬ್ಬ 3’ ಸಿನಿಮಾ ಕೂಡ ರಿಲೀಸ್‍ಗೆ ರೆಡಿಯಾಗಿದೆ.

‘ಬಿಗ್‍ಬಾಸ್ ಸೀಸನ್ 7’ರಲ್ಲಿ ನಟ ಶೈನ್ ಶೆಟ್ಟಿ ಎಲ್ಲಾ ಸ್ಪರ್ಧಿಗಳನ್ನು ಹಿಂದಿಕ್ಕಿ ಬಿಗ್‍ಬಾಸ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದರು. ಹಾಸ್ಯ ನಟ ಕುರಿ ಪ್ರತಾಪ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು. ಬಿಗ್‍ಬಾಸ್ ಸೀಸನ್ 7 ರಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಬಿಗ್‍ಬಾಸ್ ವೇದಿಕೆಯಲ್ಲಿ ನಟ ಕಿಚ್ಚ ಸುದೀಪ್ ತಮ್ಮ ಎಡಗಡೆ ನಿಂತಿದ್ದ ಶೈನ್ ಶೆಟ್ಟಿ ಕೈಯನ್ನು ಎತ್ತಿ ವಿಜೇತರೆಂದರು ಘೋಷಿಸಿದ್ದರು.

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

42 minutes ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

57 minutes ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 hour ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 hour ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 hour ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

2 hours ago