ಬೀಜಿಂಗ್: ಈಗಾಗಲೇ ಸಹಸ್ರಾರು ಮಂದಿಯನ್ನು ಬಲಿ ಪಡೆದುಕೊಂಡಿರುವ ಮಹಾಮಾರಿ ಕೊರೋನಾ ವೈರಸ್ ಚೀನಾದಲ್ಲಿ ಮತ್ತಷ್ಟು ವ್ಯಾಪಕವಾಗಿ ಹಬ್ಬುತ್ತಿದ್ದು, ಒಂದೇ ದಿನ ಬರೋಬ್ಬರಿ 121 ಮಂದಿ ಇಹಲೋಕ ತ್ಯಜಿಸಿದ್ದಾರೆ.ಇದರಿಂದ ಮೃತಪಟ್ಟವರ ಸಂಖ್ಯೆ 1400ಕ್ಕೆ ಏರಿಕೆಯಾಗಿದೆ.
ಒಂದೇ ದಿನ 5,090 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 63,851ಕ್ಕೆ ಏರಿಕೆಯಾಗಿದೆ. ಸಾಮಾನ್ಯವಾಗಿ ಪ್ರತಿನಿತ್ಯ ಸರಾಸರಿ 80 ಜನರಂತೆ ಕೊರೋನಾ ಪೀಡಿತರು ಚೀನಾದಲ್ಲಿ ಮರಣ ಹೊಂದುತ್ತಿದ್ದರು. ಆದರೆ, ಇದೇ ಮೊದಲ ಬಾರಿದೆ 121 ಮಂದಿ ಒಂದೇ ದಿನ ಸಾವನ್ನಪ್ಪಿದ್ದಾರೆ. ಈ ಎಲ್ಲಾ ಸಾವುಗಳು ಹುಬೆ ಪ್ರಾಂತ್ಯದಲ್ಲೇ ವರದಿಯಾಗಿದೆ.
ಈ ನಡುವೆ ಸಾಕಷ್ಟು ಕ್ರಮಗಳ ನಡವೆಯೂ ಕೊರೋನಾ ಹತ್ತಿಕ್ಕಲು ಚೀನಾ ವಿಫಲವಾಗಿರುವಾಗಲೇ, ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ಹುಬೆ ಪ್ರಾಂತ್ಯದ ತನ್ನ ಮುಖ್ಯಸ್ಥ ಜಿಯಾಂಗ್ ಚಾವೋಲಿಯಾಂಗ್ ಅವರನ್ನು ಕಿತ್ತೊಗೆಯಲಾಗಿದೆ.
ಕೊರೋನಾ ವೈರಸ್ ವೊದು ಜಾತಿಯ ವೈರಸ್ ಆಗಿದೆ. ಸೂಕ್ಷ್ಮ ದರ್ಶಕದಲ್ಲಿ ಇದು ಕಿರೀಟ ರೀತಿ ಕಾಣಿಸುತ್ತದೆ. ಲ್ಯಾಟಿನ್ ಭಾಷೆಯಲ್ಲಿ ಕೊರೋನಾ ಎಂದರೆ ಕಿರೀಟ ಎಂದರ್ಥ. ಹೀಗಾಗಿ ವೈರಸ್’ಗೆ ಕೊರೋನಾ ಹೆಸರು. ಚೀನಾದ ವುಹಾನ್ ನಗರದಲ್ಲಿನ ಅಕ್ರಮ ವನ್ಯ ಜೀವಿ ಮಾಂಸ ಕೇಂದ್ರದ ಮೂಲಕ ಮಾನವರಿಗೆ ವೈರಸ್ ತಗುಲಿದೆ. ವೈರಸ್ ಒಂಟೆ, ಬೆಕ್ಕು, ಬಾವಲಿ ಸೇರಿದಂತೆ ಹಲವಾರು ಪ್ರಾಣಿಗಳಲ್ಲೂ ಪ್ರವೇಶಿಸುತ್ತಿದೆ. ಪ್ರಾಣಿಗಳ ದೇಹ ಸೇರಿದ ಈ ವೈರಸ್ ಅಪರೂಪ ಎಂಬಂತೆ ಮನುಷ್ಯರ ದೇಹವನ್ನೂ ಸೇರುತ್ತಿದೆ.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…