ಬೀಜಿಂಗ್: ಮಹಾಮಾರಿ ಕೊರೋನಾ ವೈರಸ್ ನಿಂದ ಸಾವಿನ್ನಪ್ಪಿದವರ ಸಂಖ್ಯೆ ಏರಿಕೆಯಾಗುತ್ತಿದ್ದು, ಸದ್ಯ ಸಾವಿನ ಸಂಖ್ಯೆ 2,244 ತಲುಪಿದೆ. ಇದರಿಂದಾಗಿ ಚೀನಾದಲ್ಲಿ ಸಿಲುಕಿಕೊಂಡಿರುವ ಭಾರತೀಯರ ಸ್ಥಳಾಂತರ ಕೂಡ ವಿಳಂಬಗೊಳ್ಳುವಂತಾಗಿದೆ.
ವೈರಸ್ ಗೆ ಹೊಸದಾಗಿ 115 ಮಂದಿ ಬಲಿಯಾಗಿದ್ದು, ಇದರಿಂದಾಗಿ ಸಾವಿನ ಸಂಖ್ಯೆ 2,244 ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿತರ ಸಂಖ್ಯೆ 74,576ಕ್ಕೆ ತಲುಪಿದೆ ಎಂದು ವರದಿಗಳು ತಿಳಿಸಿವೆ. ಈ ಪೈಕಿ 56303 ಜನರು ಇನ್ನೂ ಗುಣಮುಖರಾಗಿಲ್ಲ. 11864 ಜನರ ಸ್ಥಿತಿ ಗಂಭೀರವಾಗಿದೆ. 16155 ಜನರು ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ವಾಪಸ್ ಕಳುಹಿಸಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗದ ಹೇಳಿಕೆ ತಿಳಿಸಿದೆ.
ಈ ನಡುವೆ ಚೀನಾದಲ್ಲಿ ಆತಂತಕ್ಕೀಡಾಗಿರುವ ಭಾರತೀಯ ರಕ್ಷಣೆಗೆ ಭಾರತೀಯ ವಾಯುಪಡೆ ಮುಂದಾಗಿದ್ದು, ಸೋಂಕು ಹೆಚ್ಚುತ್ತಿರುವ ಕಾರಣ ಭಾರತೀಯ ಸ್ಥಳಾಂತರ ಕಾರ್ಯ ಕೂಡ ವಿಳಂಬವಾಗುತ್ತಿದೆ.
ಸೋಂಕು ತಗುಲಿದವರಿಗೆ ತೀವ್ರ ಶೀತ, ಕೆಮ್ಮು, ಗಂಟಲು ಕಟ್ಟುವಿಕೆ, ಉಸಿರಾಟದ ತೊಂದರೆ, ತಲೆನೋವು, ಜ್ವರದ ಸಮಸ್ಯೆಗಳು ಉಂಟಾಗುತ್ತವೆ. ಬಳಿಕ ಇದು ನ್ಯೂಮೋನಿಯಾ ಹಾಗೂ ಕಿಡ್ನಿಗಳಿಗೆ ಹಾನಿಯುಂಟು ಮಾಡುತ್ತದೆ. ಕೊರೋನಾ ವೈರಸ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗ ಕೂಡ ಆಗಿದ್ದು, ವೈರಸ್ ಹರಡದಂತೆ ಅದನ್ನು ನಿಯಂತ್ರಣದಲ್ಲಿಡಲು ಹಾಗೂ ತಡೆಗಟ್ಟಲು ಇಡೀ ವಿಶ್ವವೇ ಹರಸಾಹಸ ಪಡುತ್ತಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…