ಚಿಕ್ಕಬಳ್ಳಾಪುರ: ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ನಡೆದಿದೆ.
ಯಶಸ್ವಿನಿ (18) ಮೃತ ಯುವತಿ. ಕಳೆದ ಒಂದು ವಾರದಿಂದ ತೀವ್ರತರನಾದ ಜ್ವರದಿಂದ ಬಳಲುತ್ತಿದ್ದ ಯಶಸ್ವಿನಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯಶಸ್ವಿನಿ ಮೃತಪಟ್ಟಿದ್ದಾಳೆ. ದ್ವಿತೀಯ ಪಿಯುಸಿಯಲ್ಲಿ 95% ಅಂಕ ಗಳಿಸಿದ್ದ ಯಶಸ್ವಿನಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು.
ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 400ಕ್ಕೂ ಹೆಚ್ಚು ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಶುಕ್ರವಾರ ರಾಜ್ಯದಲ್ಲಿ 437 ಡೆಂಗ್ಯೂ ಕೇಸ್ ದಾಖಲಾಗಿತ್ತು. ರಾಜ್ಯದಲ್ಲಿ ಒಟ್ಟು ಡೆಂಗ್ಯೂ ಕೇಸ್ 8,658ಕ್ಕೆ ಏರಿಕೆಯಾಗಿದೆ. ಶುಕ್ರವಾರದವರೆಗೆ ಡೆಂಗ್ಯೂಗೆ ಏಳು ಜನರು ಬಲಿಯಾಗಿದ್ದು, ಇದು ಎಂಟನೇ ಬಲಿಯಾಗಿದೆ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…