ನವದೆಹಲಿ : 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಸೋಲಿಸಲು ಮೈತ್ರಿಗೆ ಕರೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಪ್ರತಿ ಪಕ್ಷಗಳ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇಲ್ಲವೇ ಬಿಎಸ್ಪಿ ವರಿಷ್ಠೆ ಮಾಯಾವತಿ ಅವರ ಪರ ಬ್ಯಾಟ್ ಬೀಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ದೇವೇಗೌಡರು, ಮಮತಾ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಿದರೆ ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇನೆ. ಇಂದಿರಾ ಗಾಂಧಿ ಅವರು ದಶಕಕ್ಕೂ ಹೆಚ್ಚು ಕಾಲ ದೇಶವನ್ನು ಮುನ್ನಡೆಸಲಿಲ್ಲವೇ? ನಾವು ಪುರಷರಷ್ಟೇ ಪ್ರಧಾನಿಯಾಗಬೇಕೆಂದು ಬಯಸುವುದೇಕೆ? ಮಮತಾ, ಮಯಾವತಿ ಅವರು ಪ್ರಧಾನಿ ಅಭ್ಯರ್ಥಿಯಾಕಾಗಬಾರದು ಎಂದು ಪ್ರಶ್ನಿಸಿದ್ದಾರೆ.
ಕೇಂದ್ರದ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯವಿದೆ ಎಂದಿರುವ ದೇವೇಗೌಡರು, ತೃತೀಯ ರಂಗ ರಚನೆ ಈಗಾಗಲೇ ಏನನ್ನೂ ಹೇಳಲಾಗದು ಎಂದಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಜಂಟಿಯಾಗಿ ಸಾರ್ವತ್ರಿಕ ಚುನಾವಣೆ ಎದುರಿಸಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಜೆಡಿಎಸ್ ಕೂಡ ಬಿಜೆಪಿ ವಿರುದ್ಧ ಹೋರಾಟಕ್ಕೆ ಇತರೆ ಪಕ್ಷಗಳೊಂದಿಗೆ ಕೈ ಜೋಡಿಸಲು ಸಿದ್ಧವಿದೆ. ದೇಶದಲ್ಲಿ ಸದ್ಯ ಭಯದ ವಾತಾವರಣ ನಿರ್ಮಾಣವಾಗಿದೆ. ಉತ್ತರಪ್ರದೇಶ, ಗುಜರಾತ್, ಬಿಹಾರದಂಥ ರಾಜ್ಯಗಳಲ್ಲಿ ಅಲ್ಪಸಂಖ್ಯಾತರಿಗೆ ಉಸಿರುಗಟ್ಟಿಸುವ ವಾತಾವರಣವಿದೆ. ಹೀಗಾಗಿ ಬಿಜೆಪಿಯನ್ನ ಎದುರಿಸಲು ಮಹಾಮೈತ್ರಿ ಅತ್ಯವಶ್ಯಕ ಅಂತ ಅವ್ರು ಹೇಳಿದ್ದಾರೆ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…