ಮೈಸೂರು: ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಹುಣಸೂರು ಕಾಂಗ್ರೆಸ್ ಶಾಸಕ ಎಚ್. ಪಿ. ಮಂಜುನಾಥ್ ಹರಿಹಾಯ್ದಿದ್ದಾರೆ.
ಮೈಸೂರಿಗೆ ಇಬ್ಬರು ಮಹಾರಾಣಿ ಇದ್ದಾರೆ. ಮೂರನೇ ಮಹಾರಾಣಿಯ ಅವಶ್ಯಕತೆ ಇಲ್ಲ ಎಂದು ಲೇವಡಿ ಮಾಡಿದ ಮಂಜುನಾಥ್, ಮಹಾರಾಣಿಯಾಗಿ ಮೆರೆಯಬೇಡಿ, ಅಧಿಕಾರಿಯಾಗಿ ವರ್ತಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಆಗ್ರಹಿಸಿದರು. ನಾನು ಬರೆದ ಒಂದು ಪತ್ರಕ್ಕೂ ಡಿಸಿ ಉತ್ತರ ನೀಡುತ್ತಿಲ್ಲ ಎಂದು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.
ಹುಣಸೂರು ತಾಲೂಕಿನಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಮಂಜುನಾಥ್, ಈ ಬಗ್ಗೆ ಗಮನ ಸೆಳೆದರೂ ಡಿಸಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶಗೊಂಡರು.
ನಾಡ ಹಬ್ಬದ ಗಜ ಪಯಣ ಸಂದರ್ಭದಲ್ಲಿ ಹುಣಸೂರು ಕ್ಷೇತ್ರದ ಶಾಸಕನಾದ ನನಗೆ ಆಹ್ವಾನ ನೀಡಲಿಲ್ಲ ಎಂದು ತಗಾದೆ ತೆಗೆದ ಎಚ್. ಪಿ. ಮಂಜುನಾಥ್, ಗಜಪಯಣಕ್ಕೆ ನನ್ನನ್ನು ಏಕೆ ಆಹ್ವಾನಿಸಲಿಲ್ಲ ಎಂದು ಪ್ರಶ್ನಿಸಿದರು. ನೀವೇ ಗಂಧದ ಕಡ್ಡಿ ಬೆಳಗಿದಿರಿ, ಆ ಕೆಲಸ ನಾವು ಮಾಡುತ್ತಿರಲಿಲ್ಲವೇ ಎಂದು ಸವಾಲೆಸೆದರು. ನಿಮಗೆ ಅಷ್ಟೊಂದು ಪ್ರಚಾರದ ಆಸಕ್ತಿ ಇದ್ದರೆ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧಿಸಿ ಎಂದು ಎಚ್. ಪಿ. ಮಂಜುನಾಥ್ ತರಾಟೆಗೆ ತೆಗೆದುಕೊಂಡರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…