ಮಹಾರಾಷ್ಟ್ರದಲ್ಲಿ ಒಡೆದ ಅಣೆಕಟ್ಟು : 6 ಸಾವು, ಹಲವರು ಜನ ನಾಪತ್ತೆ -Vishwanews24
ಪುಣೆ, :ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ರತ್ನಗಿರಿ ಜಿಲ್ಲೆಯಲ್ಲಿರುವ ತಿವಾರೆ ಅಣೆಕಟ್ಟು ಒಡೆದ ಪರಿಣಾಮ 12 ಮನೆಗಳು ಕೊಚ್ಚಿಹೋಗಿದ್ದು 6 ಜನರು ಮೃತಪಟ್ಟಿದ್ದಾರೆ.
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತಿವಾರೆ ಅಣೆಕಟ್ಟು ಒಡೆದಿದೆ. ಇದರ ಸಮೀಪದಲ್ಲಿದ್ದ 12 ಮನೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಘಟನೆಯಲ್ಲಿ 6 ಜನರು ಮೃತಪಟ್ಟಿದ್ದು 20ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
6 bodies recovered till now after Tiware dam in Ratnagiri was breached. Rescue operations continue. 12 houses near the dam have been washed away. #Maharashtra pic.twitter.com/vkr71LBPCn
— ANI (@ANI) July 3, 2019
ಜಲಾಶಯದ ಸನಿಹದಲ್ಲೇ ಇದ್ದ ಸುಮಾರು 12 ಮನೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಪೊಲೀಸ್ ಹಾಗೂ ಸ್ವಯಂ ಸೇವಕರು ಸ್ಥಳದಲ್ಲಿದ್ದು, ನಾಪತ್ತೆಯಾದವರ ಶೋಧ ಕಾರ್ಯ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಮುಂಬೈಯಿಂದ 300 ಕಿಲೋ ಮೀಟರ್ ದೂರದಲ್ಲಿರುವ ರತ್ನಗಿರಿ ಜಿಲ್ಲೆಯಲ್ಲಿ ಚಿಪ್ಲನ್ ಹತ್ತಿರ ತಿವಾರೆ ಎಂಬಲ್ಲಿ ಸಣ್ಣ ಅಣೆಕಟ್ಟು ಧಾರಾಕಾರ ಮಳೆಗೆ ಒಡೆದು ನೀರು ಹೊರಬಂದು ಜಲಾವೃತವಾಗಿ ಕಣ್ಮರೆಯಾದವರ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.
ಕಳೆದ ಕೆಲವು ದಿನಗಳಿಂದಲೂ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪ್ರವಾಹ ನೀರು ಮನೆಗೆ ನುಗ್ಗಿ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಮಂಗಳವಾರ ಸಾರ್ವತ್ರಿಕ ರಜೆ ದಿನವನ್ನಾಗಿ ಘೋಷಿಸಲಾಗಿತ್ತು.
