Featured

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ : ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ -Vishwanews24

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ : ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ -Vishwanews24

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಉಲ್ಪಣವಾಗುತ್ತಿದ್ದು, ಇದು ಸಿಎಂ ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಂದಿನ 8 ರಿಂದ 15 ದಿನಗಳ ಕಾಲ ಹೊಸ ಸೋಂಕು ಪ್ರಕರಣಗಳು ಹೀಗೆಯೇ ಮುಂದುವರಿದರೆ ಲಾಕ್​ಡೌನ್​ ಘೋಷಣೆ ಮಾಡುವ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಉದ್ಧವ್​ ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ಹೇರುವ ಕುರಿತು ನಡೆದ ಸಭೆಯಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ, ‘ಮಹಾರಾಷ್ಟ್ರದ ಕೊವಿಡ್ ಪರಿಸ್ಥಿತಿ ಗಂಭೀರವಾಗಿದೆ. ದೈನಂದಿನ ಅಂಕಿ ಅಂಶಗಳ ಪ್ರಸ್ತುತ ಏರಿಕೆ ಆತಂಕ ಮೂಡಿಸಿದೆ. ಇದು ಸೋಂಕಿನ ಹೊಸ ಅಲೆಯೇ ಎಂದು ಕಂಡುಹಿಡಿಯಲು ಒಂದೆರಡು ವಾರಗಳು ಬೇಕು. ಮತ್ತೊಂದು ಲಾಕ್​​ಡೌನ್ ತಪ್ಪಿಸಲು ಜನರು ಕೊರೊನಾ ವೈರಸ್ ನಿಯಂತ್ರಣ ಶಿಷ್ಟಾಚಾರಗಳನ್ನು ಅನುಸರಿಸಬೇಕೆಂದು ಅವರು ಎಚ್ಚರಿಸಿದರು.

ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್‌ ಅಟ್ಟಹಾಸ : ಕರೋನ ನೆಗೆಟಿವ್‌ ವರದಿಯೊಂದಿಗೆ ಮಾತ್ರ ಕರ್ನಾಟಕ ಎಂಟ್ರಿ -Vishwanews24

ಇದೇ ವಿಚಾರವಾಗಿ ಮಾತನಾಡಿದ್ದ ಮುಂಬೈ ಮೇಯರ್​ ಕಿಶೋರಿ ಪಡ್ನೇಕರ್, ಕೊರೊನಾ ಸೋಂಕು ನಿಯಂತ್ರಣಕ್ಕೆ ಸಾಕಷ್ಟು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಕೊವಿಡ್​ ನಿಯಮದನ್ವಯ, ಮಾಸ್ಕ್​ ಹಾಕುವುದು ಕಡ್ಡಾಯವಾದರೆ, ಗುಂಪು ಸೇರುವುದರ ಮೇಲೆ ನಿಷೇಧ ಹೇರಲಾಗಿದೆ. ಆದಾಗ್ಯೂ, ಜನರು ನಿಯಮವನ್ನು ಪಾಲನೆ ಮಾಡುತ್ತಿಲ್ಲ. ಹೀಗಾಗಿ, ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲನೆ ಸೂಚಿಸಲಾಗಿದೆ. ನೀವು ಕೊವಿಡ್​ ನಿಯಮ ಪಾಲನೆ ಮಾಡದೆ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚುತ್ತಾ ಹೋದರೆ ಲಾಕ್​ಡೌನ್​ ಘೋಷಣೆ ಮಾಡಬೇಕಾಗುತ್ತದೆ. ಇದನ್ನು ತಪ್ಪಿಸಬೇಕಾದರೆ ನೀವು ನಿಯಮ ಪಾಲನೆ ಮಾಡಿ ಎಂದು ಹೇಳಿದ್ದರು

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

6 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

7 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

7 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

8 hours ago