Featured

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ : ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ -Vishwanews24

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ : ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ -Vishwanews24

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಉಲ್ಪಣವಾಗುತ್ತಿದ್ದು, ಇದು ಸಿಎಂ ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಂದಿನ 8 ರಿಂದ 15 ದಿನಗಳ ಕಾಲ ಹೊಸ ಸೋಂಕು ಪ್ರಕರಣಗಳು ಹೀಗೆಯೇ ಮುಂದುವರಿದರೆ ಲಾಕ್​ಡೌನ್​ ಘೋಷಣೆ ಮಾಡುವ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಉದ್ಧವ್​ ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ಹೇರುವ ಕುರಿತು ನಡೆದ ಸಭೆಯಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ, ‘ಮಹಾರಾಷ್ಟ್ರದ ಕೊವಿಡ್ ಪರಿಸ್ಥಿತಿ ಗಂಭೀರವಾಗಿದೆ. ದೈನಂದಿನ ಅಂಕಿ ಅಂಶಗಳ ಪ್ರಸ್ತುತ ಏರಿಕೆ ಆತಂಕ ಮೂಡಿಸಿದೆ. ಇದು ಸೋಂಕಿನ ಹೊಸ ಅಲೆಯೇ ಎಂದು ಕಂಡುಹಿಡಿಯಲು ಒಂದೆರಡು ವಾರಗಳು ಬೇಕು. ಮತ್ತೊಂದು ಲಾಕ್​​ಡೌನ್ ತಪ್ಪಿಸಲು ಜನರು ಕೊರೊನಾ ವೈರಸ್ ನಿಯಂತ್ರಣ ಶಿಷ್ಟಾಚಾರಗಳನ್ನು ಅನುಸರಿಸಬೇಕೆಂದು ಅವರು ಎಚ್ಚರಿಸಿದರು.

ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್‌ ಅಟ್ಟಹಾಸ : ಕರೋನ ನೆಗೆಟಿವ್‌ ವರದಿಯೊಂದಿಗೆ ಮಾತ್ರ ಕರ್ನಾಟಕ ಎಂಟ್ರಿ -Vishwanews24

ಇದೇ ವಿಚಾರವಾಗಿ ಮಾತನಾಡಿದ್ದ ಮುಂಬೈ ಮೇಯರ್​ ಕಿಶೋರಿ ಪಡ್ನೇಕರ್, ಕೊರೊನಾ ಸೋಂಕು ನಿಯಂತ್ರಣಕ್ಕೆ ಸಾಕಷ್ಟು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಕೊವಿಡ್​ ನಿಯಮದನ್ವಯ, ಮಾಸ್ಕ್​ ಹಾಕುವುದು ಕಡ್ಡಾಯವಾದರೆ, ಗುಂಪು ಸೇರುವುದರ ಮೇಲೆ ನಿಷೇಧ ಹೇರಲಾಗಿದೆ. ಆದಾಗ್ಯೂ, ಜನರು ನಿಯಮವನ್ನು ಪಾಲನೆ ಮಾಡುತ್ತಿಲ್ಲ. ಹೀಗಾಗಿ, ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲನೆ ಸೂಚಿಸಲಾಗಿದೆ. ನೀವು ಕೊವಿಡ್​ ನಿಯಮ ಪಾಲನೆ ಮಾಡದೆ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚುತ್ತಾ ಹೋದರೆ ಲಾಕ್​ಡೌನ್​ ಘೋಷಣೆ ಮಾಡಬೇಕಾಗುತ್ತದೆ. ಇದನ್ನು ತಪ್ಪಿಸಬೇಕಾದರೆ ನೀವು ನಿಯಮ ಪಾಲನೆ ಮಾಡಿ ಎಂದು ಹೇಳಿದ್ದರು

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

15 minutes ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

3 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

3 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

3 hours ago