ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದ ಮಾವೋವಾದಿಗಳ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೀವ್ರವಾಗಿ ಖಂಡಿಸಿದ್ದಾರೆ.
ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಕ್ಸಲರು ಐಇಡಿ ಬಳಸಿ ಸ್ಫೋಟಿಸಿದ್ದು, 16 ಮಂದಿ ನಕ್ಸಲ್ ನಿಗ್ರಹ ದಳದ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಗಡ್ಚಿರೋಲಿ ಜಿಲ್ಲೆಯ ಕುರ್ಖೇಡಾನಲ್ಲಿ ಈ ಕೃತ್ಯ ನಡೆದಿದೆ. ಸಿ-60 ಪೊಲೀಸರ ತಂಡ ಕುರ್ಖೆಡಾಕ್ಕೆ ವಾಹನದಲ್ಲಿ ತೆರಳುತ್ತಿದ್ದಾಗ ಐಇಡಿ ಬಳಸಿ ಸ್ಫೋಟಿಸಿದ್ದಾರೆ. 15 ಮಂದಿ ಪೊಲೀಸರ ಜೊತೆ ಡ್ರೈವರ್ ಈ ದಾಳಿಗೆ ಬಲಿಯಾಗಿದ್ದಾರೆ.
ಕುರ್ಖೇದ-ಕೊರ್ಚಿ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಭಯೋತ್ಪಾದನ ನಿಗ್ರಹ ದಳ ವಾಹನವನ್ನು ಗುರಿಯಾಗಿರಿಸಿಕೊಂಡು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ ಪರಿಣಾಮ 16 ಮಂಡಿ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಗಡ್ಚಿರೋಲಿಯಲ್ಲಿ ನಮ್ಮ ಭದ್ರತಾ ಪಡೆ ಸಿಬ್ಬಂದಿ ಮೇಲೆ ನಡೆಸಿದ ದಾಳಿಯನ್ನು ಹೇಯಕೃತ್ಯವೆಂದು ಭಾವಿಸುತ್ತೇನೆ. ಹುತಾತ್ಮರ ತ್ಯಾಗವನ್ನು ಮರೆಯುವುದಿಲ್ಲ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಈ ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…