ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದ ಮಾವೋವಾದಿಗಳ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೀವ್ರವಾಗಿ ಖಂಡಿಸಿದ್ದಾರೆ.
ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಕ್ಸಲರು ಐಇಡಿ ಬಳಸಿ ಸ್ಫೋಟಿಸಿದ್ದು, 16 ಮಂದಿ ನಕ್ಸಲ್ ನಿಗ್ರಹ ದಳದ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಗಡ್ಚಿರೋಲಿ ಜಿಲ್ಲೆಯ ಕುರ್ಖೇಡಾನಲ್ಲಿ ಈ ಕೃತ್ಯ ನಡೆದಿದೆ. ಸಿ-60 ಪೊಲೀಸರ ತಂಡ ಕುರ್ಖೆಡಾಕ್ಕೆ ವಾಹನದಲ್ಲಿ ತೆರಳುತ್ತಿದ್ದಾಗ ಐಇಡಿ ಬಳಸಿ ಸ್ಫೋಟಿಸಿದ್ದಾರೆ. 15 ಮಂದಿ ಪೊಲೀಸರ ಜೊತೆ ಡ್ರೈವರ್ ಈ ದಾಳಿಗೆ ಬಲಿಯಾಗಿದ್ದಾರೆ.
ಕುರ್ಖೇದ-ಕೊರ್ಚಿ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಭಯೋತ್ಪಾದನ ನಿಗ್ರಹ ದಳ ವಾಹನವನ್ನು ಗುರಿಯಾಗಿರಿಸಿಕೊಂಡು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ ಪರಿಣಾಮ 16 ಮಂಡಿ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಗಡ್ಚಿರೋಲಿಯಲ್ಲಿ ನಮ್ಮ ಭದ್ರತಾ ಪಡೆ ಸಿಬ್ಬಂದಿ ಮೇಲೆ ನಡೆಸಿದ ದಾಳಿಯನ್ನು ಹೇಯಕೃತ್ಯವೆಂದು ಭಾವಿಸುತ್ತೇನೆ. ಹುತಾತ್ಮರ ತ್ಯಾಗವನ್ನು ಮರೆಯುವುದಿಲ್ಲ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಈ ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…