Featured

ಮಹಾರಾಷ್ಟ್ರದಲ್ಲಿ ಬಿಜೆಪಿಯ ಹೀನ ರಾಜಕಾರಣ  ; ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ : ದಿನೇಶ್ ಗುಂಡೂರಾವ್

ಮಹಾರಾಷ್ಟ್ರದಲ್ಲಿ ಬಿಜೆಪಿಯ ಹೀನ ರಾಜಕಾರಣ  ; ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ : ದಿನೇಶ್ ಗುಂಡೂರಾವ್

ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು, ಮಹಾರಾಷ್ಟ್ರದಲ್ಲಿ ಬಿಜೆಪಿ ಹೀನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ ಬಿಜೆಪಿ ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು. ಮಧ್ಯಪ್ರದೇಶ, ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಹೀನ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ವರ್ತನೆ ಸಂವಿಧಾನ ಬಾಹಿರ ಎಂದು ಕಿಡಿಕಾರಿದ್ದಾರೆ.

ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಬೊಗಳೆ ಭಾಷಣ ಬಿಗಿಯುವ ಮೋದಿಯವರು, ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣ ಯಾರು ತಿಂದು ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೇ? ಮೋದಿಯವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ಇಡಿ ತನಿಖೆಗೆ ಆದೇಶಿಸಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಕ್ಕಾಗಿ ಬಿಜೆಪಿ ಎಷ್ಟು ಕೀಳು ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದಕ್ಕೆ ಮಹಾರಾಷ್ಟ್ರದ ಇಂದಿನ ರಾಜಕೀಯ ಸನ್ನಿವೇಶ ಮಗದೊಂದು ಉದಾಹರಣೆ. ಸಂವಿಧಾನಕ್ಕೆ ಸದಾ ಅಪಚಾರ ಎಸಗುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಕತ್ತು ಹಿಸುಕುತ್ತಾ ಬಂದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಅನೈತಿಕ ರಾಜಕಾರಣದ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಸಂವಿಧಾನಬದ್ಧವಾಗಿ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸುವ ಕೆಟ್ಟ ಸಂಪ್ರದಾಯ ಶುರುವಾಗಿದ್ದೇ ಕರ್ನಾಟಕದಲ್ಲಿ. ಆಪರೇಷನ್ ಕಮಲದ ಜನಕ ಯಡಿಯೂರಪ್ಪನವರು. ಬಿಎಸ್‍ವೈ ಸೃಷ್ಟಿಸಿದ ಪಿಡುಗನ್ನು ಇಂದು ದೇಶಾದ್ಯಂತ ಬಿಜೆಪಿಯವರು ಹಬ್ಬಿಸಿ ರಾಜಕೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಇಂತಹ ಪಿಡುಗಿಗೆ ಜನರೇ ಕಡಿವಾಣ ಹಾಕಬೇಕು ಎಂದು ಕೆಂಡಕಾರಿದ್ದಾರೆ.

Vishwa News 24

Recent Posts

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

10 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

22 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

22 hours ago