ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು, ಮಹಾರಾಷ್ಟ್ರದಲ್ಲಿ ಬಿಜೆಪಿ ಹೀನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ ಬಿಜೆಪಿ ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು. ಮಧ್ಯಪ್ರದೇಶ, ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಹೀನ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ವರ್ತನೆ ಸಂವಿಧಾನ ಬಾಹಿರ ಎಂದು ಕಿಡಿಕಾರಿದ್ದಾರೆ.
ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಬೊಗಳೆ ಭಾಷಣ ಬಿಗಿಯುವ ಮೋದಿಯವರು, ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣ ಯಾರು ತಿಂದು ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೇ? ಮೋದಿಯವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ಇಡಿ ತನಿಖೆಗೆ ಆದೇಶಿಸಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ.
ಅಧಿಕಾರಕ್ಕಾಗಿ ಬಿಜೆಪಿ ಎಷ್ಟು ಕೀಳು ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದಕ್ಕೆ ಮಹಾರಾಷ್ಟ್ರದ ಇಂದಿನ ರಾಜಕೀಯ ಸನ್ನಿವೇಶ ಮಗದೊಂದು ಉದಾಹರಣೆ. ಸಂವಿಧಾನಕ್ಕೆ ಸದಾ ಅಪಚಾರ ಎಸಗುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಕತ್ತು ಹಿಸುಕುತ್ತಾ ಬಂದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಅನೈತಿಕ ರಾಜಕಾರಣದ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ ಎಂದು ಹರಿಹಾಯ್ದಿದ್ದಾರೆ.
ಸಂವಿಧಾನಬದ್ಧವಾಗಿ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸುವ ಕೆಟ್ಟ ಸಂಪ್ರದಾಯ ಶುರುವಾಗಿದ್ದೇ ಕರ್ನಾಟಕದಲ್ಲಿ. ಆಪರೇಷನ್ ಕಮಲದ ಜನಕ ಯಡಿಯೂರಪ್ಪನವರು. ಬಿಎಸ್ವೈ ಸೃಷ್ಟಿಸಿದ ಪಿಡುಗನ್ನು ಇಂದು ದೇಶಾದ್ಯಂತ ಬಿಜೆಪಿಯವರು ಹಬ್ಬಿಸಿ ರಾಜಕೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಇಂತಹ ಪಿಡುಗಿಗೆ ಜನರೇ ಕಡಿವಾಣ ಹಾಕಬೇಕು ಎಂದು ಕೆಂಡಕಾರಿದ್ದಾರೆ.
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…