ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು, ಮಹಾರಾಷ್ಟ್ರದಲ್ಲಿ ಬಿಜೆಪಿ ಹೀನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ ಬಿಜೆಪಿ ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು. ಮಧ್ಯಪ್ರದೇಶ, ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಹೀನ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ವರ್ತನೆ ಸಂವಿಧಾನ ಬಾಹಿರ ಎಂದು ಕಿಡಿಕಾರಿದ್ದಾರೆ.
ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಬೊಗಳೆ ಭಾಷಣ ಬಿಗಿಯುವ ಮೋದಿಯವರು, ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣ ಯಾರು ತಿಂದು ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೇ? ಮೋದಿಯವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ಇಡಿ ತನಿಖೆಗೆ ಆದೇಶಿಸಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ.
ಅಧಿಕಾರಕ್ಕಾಗಿ ಬಿಜೆಪಿ ಎಷ್ಟು ಕೀಳು ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದಕ್ಕೆ ಮಹಾರಾಷ್ಟ್ರದ ಇಂದಿನ ರಾಜಕೀಯ ಸನ್ನಿವೇಶ ಮಗದೊಂದು ಉದಾಹರಣೆ. ಸಂವಿಧಾನಕ್ಕೆ ಸದಾ ಅಪಚಾರ ಎಸಗುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಕತ್ತು ಹಿಸುಕುತ್ತಾ ಬಂದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಅನೈತಿಕ ರಾಜಕಾರಣದ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ ಎಂದು ಹರಿಹಾಯ್ದಿದ್ದಾರೆ.
ಸಂವಿಧಾನಬದ್ಧವಾಗಿ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸುವ ಕೆಟ್ಟ ಸಂಪ್ರದಾಯ ಶುರುವಾಗಿದ್ದೇ ಕರ್ನಾಟಕದಲ್ಲಿ. ಆಪರೇಷನ್ ಕಮಲದ ಜನಕ ಯಡಿಯೂರಪ್ಪನವರು. ಬಿಎಸ್ವೈ ಸೃಷ್ಟಿಸಿದ ಪಿಡುಗನ್ನು ಇಂದು ದೇಶಾದ್ಯಂತ ಬಿಜೆಪಿಯವರು ಹಬ್ಬಿಸಿ ರಾಜಕೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಇಂತಹ ಪಿಡುಗಿಗೆ ಜನರೇ ಕಡಿವಾಣ ಹಾಕಬೇಕು ಎಂದು ಕೆಂಡಕಾರಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…