Featured

ಮಹಾರಾಷ್ಟ್ರದಲ್ಲಿ ಬಿಜೆಪಿಯ ಹೀನ ರಾಜಕಾರಣ  ; ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ : ದಿನೇಶ್ ಗುಂಡೂರಾವ್ – Vishwanews24

ಮಹಾರಾಷ್ಟ್ರದಲ್ಲಿ ಬಿಜೆಪಿಯ ಹೀನ ರಾಜಕಾರಣ  ; ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ : ದಿನೇಶ್ ಗುಂಡೂರಾವ್

ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು, ಮಹಾರಾಷ್ಟ್ರದಲ್ಲಿ ಬಿಜೆಪಿ ಹೀನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ ಬಿಜೆಪಿ ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು. ಮಧ್ಯಪ್ರದೇಶ, ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಹೀನ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ವರ್ತನೆ ಸಂವಿಧಾನ ಬಾಹಿರ ಎಂದು ಕಿಡಿಕಾರಿದ್ದಾರೆ.

ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಬೊಗಳೆ ಭಾಷಣ ಬಿಗಿಯುವ ಮೋದಿಯವರು, ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣ ಯಾರು ತಿಂದು ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೇ? ಮೋದಿಯವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ಇಡಿ ತನಿಖೆಗೆ ಆದೇಶಿಸಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಕ್ಕಾಗಿ ಬಿಜೆಪಿ ಎಷ್ಟು ಕೀಳು ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದಕ್ಕೆ ಮಹಾರಾಷ್ಟ್ರದ ಇಂದಿನ ರಾಜಕೀಯ ಸನ್ನಿವೇಶ ಮಗದೊಂದು ಉದಾಹರಣೆ. ಸಂವಿಧಾನಕ್ಕೆ ಸದಾ ಅಪಚಾರ ಎಸಗುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಕತ್ತು ಹಿಸುಕುತ್ತಾ ಬಂದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಅನೈತಿಕ ರಾಜಕಾರಣದ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಸಂವಿಧಾನಬದ್ಧವಾಗಿ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸುವ ಕೆಟ್ಟ ಸಂಪ್ರದಾಯ ಶುರುವಾಗಿದ್ದೇ ಕರ್ನಾಟಕದಲ್ಲಿ. ಆಪರೇಷನ್ ಕಮಲದ ಜನಕ ಯಡಿಯೂರಪ್ಪನವರು. ಬಿಎಸ್‍ವೈ ಸೃಷ್ಟಿಸಿದ ಪಿಡುಗನ್ನು ಇಂದು ದೇಶಾದ್ಯಂತ ಬಿಜೆಪಿಯವರು ಹಬ್ಬಿಸಿ ರಾಜಕೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಇಂತಹ ಪಿಡುಗಿಗೆ ಜನರೇ ಕಡಿವಾಣ ಹಾಕಬೇಕು ಎಂದು ಕೆಂಡಕಾರಿದ್ದಾರೆ.

Vishwa News 24

Recent Posts

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

24 seconds ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

12 minutes ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

19 minutes ago

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…

27 minutes ago

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

3 hours ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

4 hours ago