Mumbai: Vehicles ply on a waterlogged street during rain, at King's circle in Mumbai, Friday, July 3, 2020. (PTI Photo/Shashank Parade)(PTI03-07-2020_000101A)
ಮಹಾರಾಷ್ಟ್ರ: ರಾಜ್ಯದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಮಹಾರಾಷ್ಟ್ರದಲ್ಲೂ ಸಹ ಮಳೆಯ ಅಬ್ಬರ ಮುಂದುವರೆದಿದ್ದು, ಇಂದಿನಿಂದ 5 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಪಾಲ್ಘರ್, ರಾಯಗಡ, ಪುಣೆ, ಕೊಲ್ಹಾಪುರ ಮತ್ತು ಸತಾರಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಹಾರಾಷ್ಟ್ರದ ಹಲವಾರು ಭಾಗಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ತಂಡಗಳು ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನ ರಾಜ್ಯದಲ್ಲಿ ನಿಯೋಜಿಸಲಾಗಿದೆ. ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿಗಳು ಎದುರಾಗಿದ್ದು,
ಭೂಕುಸಿತಗಳು ಆಗಿದೆ ಎಂದು ವರದಿಯಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ‘ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿವೆ. ನಾನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಎಲ್ಲಾ ಅಧಿಕಾರಿಗಳು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಎಲ್ಲಾ ಡಿಎಂಗಳು ಕ್ಷೇತ್ರದಲ್ಲಿದ್ದಾರೆ. ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…