ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ೧೪ ದಿನ ಗೃಹಬಂಧನ ಮತ್ತು ಅವರ ಮನೆ ಸೀಲ್-ಡೌನ್: ಆರೋಗ್ಯ ಸಚಿವ ಬಿ.ಶ್ರೀರಾಮುಲು | vishwanews24

Ududpi: ಮಹಾರಾಷ್ಟ್ರದಿಂದ ಮರಳಿದವರನ್ನು ಇನ್ನು ಮುಂದೆ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಬೇಕಿಲ್ಲ. 14 ದಿನಗಳ ಕಾಲವೂ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕು. ಈ ಸಂದರ್ಭದಲ್ಲಿ ಮನೆಯನ್ನೇ ಸೀಲ್‌ಡೌನ್‌ ಮಾಡಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಈ ಬಗ್ಗೆ ಜೂನ್ 9 ರ ಮಂಗಳವಾರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಬಂದು ಹೋಂ ಕ್ವಾರಂಟೈನ್‌ಗೆ ಒಳಗಾಗುವ ವ್ಯಕ್ತಿಯ ಮನೆಯನ್ನು ಸಂಪೂರ್ಣವಾಗಿ ಸೀಲ್‌ಡೌನ್‌ ಮಾಡಲಾಗುವುದು. ವ್ಯಕ್ತಿಯು 14 ದಿನಗಳ ಕಾಲ ಮನೆಯಲ್ಲೇ ಇರಬೇಕು. ಮನೆಯಿಂದ ಹೊರಬಂದಲ್ಲಿ ಮೊಕದ್ದಮೆ ದಾಖಲಿಸಿಲಾಗುವುದು. ಈ ನಿರ್ಧಾರ ರಾಜ್ಯ ಮಟ್ಟದಲ್ಲಿ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮಹಾರಾಷ್ಟ್ರದಿಂದ ಮರಳಿದ ವ್ಯಕ್ತಿಯ ಮನೆಯು ಅಪಾರ್ಟ್‌ಮೆಂಟ್‌ನಲ್ಲಿ ಇದ್ದಲ್ಲಿ ಸಂಪೂರ್ಣ ಅಪಾರ್ಟ್‌ಮೆಂಟ್‌ನ್ನು ಸೀಲ್‌ಡೌನ್‌ ಮಾಡಲಾಗುವುದಿಲ್ಲ. ಬದಲಾಗಿ ವ್ಯಕ್ತಿ ವಾಸಿಸುವ ನಿವಾಸವನ್ನು ಮಾತ್ರ ಸೀಲ್‌ಡೌನ್‌ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಆಯಾ ಜಿಲ್ಲೆಯ ಮೇಲೆ ಸಂಪೂರ್ಣ ಅಧಿಕಾರವನ್ನು ಜಿಲ್ಲಾಧಿಕಾರಿಗೆ ನೀಡಲಾಗಿದೆ ಎಂದೂ ಕೂಡಾ ಈ ಸಂದರ್ಭದಲ್ಲಿ ಹೇಳಿದರು.

ನಾವು ಪೊಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕರನ್ನು ನೇಮಿಸುತ್ತೇವೆ. ಹಾಗೆಯೇ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಮೂಲಕವು ಕ್ವಾರಂಟೈನ್‌ಗೆ ಒಳಗಾದವರ ಮೇಲೆ ಗಮನವಿರಿಸಲಾಗುವುದು. ಸ್ಥಳೀಯರು ಕ್ವಾರಂಟೈನ್‌ಗೆ ಒಳಗಾದವರನ್ನು ಮನೆಯಿಂದ ಹೊರ ಹೋದದ್ದನ್ನು ಗಮನಿಸಿದ್ದಲ್ಲಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಇನ್ನು ಕ್ವಾರಂಟೈನ್‌ಗೆ ಒಳಗಾಗಿರುವ ವ್ಯಕ್ತಿಯ ಕುಟುಂಬವು ತೀರಾ ಬಡವರಾಗಿದ್ದಲ್ಲಿ ನಾವು ದೇವಾಲಯದ ಮೂಲಕ ಕಿಟ್ ನೀಡುತ್ತೇವೆ. ಅವರಿಗೆ ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

23 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

23 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago