ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ವೊಂದು ಮಹಾರಾಷ್ಟ್ರದ ದೇವಗಢ ಸಮೀಪ ಸೋಮವಾರ ತಡರಾತ್ರಿ ಸಂಭವಿಸಿದ ಅವಘಡದಿಂದಾಗಿ ಮುಳುಗಡೆಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಆಳಸಮುದ್ರ ಸ್ಟೀಲ್ಬೋಟ್ ಪಡುತೋನ್ಸೆ ಬೆಂಗ್ರೆ ಹೂಡೆ ನಿವಾಸಿ ದಿನೇಶ್ ತಿಂಗಳಾಯ ಅವರಿಗೆ ಸೇರಿದ ಶಿವರಕ್ಷ ಎಂದು ಗುರುತಿಸಲಾಗಿದೆ.
ಬೋಟಿನಲ್ಲಿದ್ದ ಭಟ್ಕಳ ಮೂಲದ ಮೀನುಗಾರರಾದ ಸುನಿಲ್ ಮಂಜುನಾಥ್, ಸುರೇಶ್ ಮಂಜುನಾಥ್, ಜಗನ್ನಾಥ ರಾಮ, ಪ್ರಶಾಂತ್ ಮೂಡಗಿ, ಗಜೇಂದ್ರ ಪಾಂಡುರಂಗ, ಕೃಷ್ಣ ಮೊಗೇರ, ಲೋಹಿತ್ ಧರ್ಮ ಅವರನ್ನು ಬೇರೊಂದು ಬೋಟ್ನ ಸಹಾಯದಿಂದ ರಕ್ಷಿಸಲಾಗಿದೆ.
ಎ. 6ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿದ ಬೋಟ್ ಮಹಾರಾಷ್ಟ್ರದ ರತ್ನಾಗಿರಿ ಸಮೀಪ ಸುಮಾರು 42 ಮಾರು ಅಳದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದು, ಈ ವೇಳೆ ಬೋಟಿನ ಅಡಿಭಾಗಕ್ಕೆ ಯಾವುದೋ ವಸ್ತು ಡಿಕ್ಕಿಯಾಗಿ ಬೋಟ್ನೊಳಗೆ ನೀರು ತುಂಬಿಕೊಂಡಿತು. ತಕ್ಷಣವೇ ಎಚ್ಚೆತ್ತುಕೊಂಡ ಮೀನುಗಾರರು ಸಮೀಪದಲ್ಲಿರುವ ಬೋಟ್ನವರಿಗೆ ಮಾಹಿತಿ ನೀಡಿದರು.
ಆ ನಂತರ ಶಿವತೇಜಸ್, ವರಸಿದ್ದಿ, ಹನುಮ ಸಾನಿಧ್ಯ ಮತ್ತು ರಾಧಾಂಬಿಕ ಹೆಸರಿನ ಬೋಟ್ಗಳ ಸಹಾಯದಿಂದ ಮುಳುಗಡೆಯಾಗುತ್ತಿದ್ದ ಶಿವರಕ್ಷ ಬೋಟನ್ನು ಎಳೆದು ತರಲಾಯಿತು. ಆದರೆ ಸುಮಾರು 34ಮಾರು ಆಳದೂರದಲ್ಲಿ ದೇವಗಡ ಸಮೀಪ ಎಳೆದು ತರುತ್ತಿದ್ದಾಗ ಬೋಟ್ ಸಂಪೂರ್ಣ ಮುಳುಗಡೆಗೊಂಡಿತು ಎನ್ನಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…