ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ವೊಂದು ಮಹಾರಾಷ್ಟ್ರದ ದೇವಗಢ ಸಮೀಪ ಸೋಮವಾರ ತಡರಾತ್ರಿ ಸಂಭವಿಸಿದ ಅವಘಡದಿಂದಾಗಿ ಮುಳುಗಡೆಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಆಳಸಮುದ್ರ ಸ್ಟೀಲ್ಬೋಟ್ ಪಡುತೋನ್ಸೆ ಬೆಂಗ್ರೆ ಹೂಡೆ ನಿವಾಸಿ ದಿನೇಶ್ ತಿಂಗಳಾಯ ಅವರಿಗೆ ಸೇರಿದ ಶಿವರಕ್ಷ ಎಂದು ಗುರುತಿಸಲಾಗಿದೆ.
ಬೋಟಿನಲ್ಲಿದ್ದ ಭಟ್ಕಳ ಮೂಲದ ಮೀನುಗಾರರಾದ ಸುನಿಲ್ ಮಂಜುನಾಥ್, ಸುರೇಶ್ ಮಂಜುನಾಥ್, ಜಗನ್ನಾಥ ರಾಮ, ಪ್ರಶಾಂತ್ ಮೂಡಗಿ, ಗಜೇಂದ್ರ ಪಾಂಡುರಂಗ, ಕೃಷ್ಣ ಮೊಗೇರ, ಲೋಹಿತ್ ಧರ್ಮ ಅವರನ್ನು ಬೇರೊಂದು ಬೋಟ್ನ ಸಹಾಯದಿಂದ ರಕ್ಷಿಸಲಾಗಿದೆ.
ಎ. 6ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿದ ಬೋಟ್ ಮಹಾರಾಷ್ಟ್ರದ ರತ್ನಾಗಿರಿ ಸಮೀಪ ಸುಮಾರು 42 ಮಾರು ಅಳದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದು, ಈ ವೇಳೆ ಬೋಟಿನ ಅಡಿಭಾಗಕ್ಕೆ ಯಾವುದೋ ವಸ್ತು ಡಿಕ್ಕಿಯಾಗಿ ಬೋಟ್ನೊಳಗೆ ನೀರು ತುಂಬಿಕೊಂಡಿತು. ತಕ್ಷಣವೇ ಎಚ್ಚೆತ್ತುಕೊಂಡ ಮೀನುಗಾರರು ಸಮೀಪದಲ್ಲಿರುವ ಬೋಟ್ನವರಿಗೆ ಮಾಹಿತಿ ನೀಡಿದರು.
ಆ ನಂತರ ಶಿವತೇಜಸ್, ವರಸಿದ್ದಿ, ಹನುಮ ಸಾನಿಧ್ಯ ಮತ್ತು ರಾಧಾಂಬಿಕ ಹೆಸರಿನ ಬೋಟ್ಗಳ ಸಹಾಯದಿಂದ ಮುಳುಗಡೆಯಾಗುತ್ತಿದ್ದ ಶಿವರಕ್ಷ ಬೋಟನ್ನು ಎಳೆದು ತರಲಾಯಿತು. ಆದರೆ ಸುಮಾರು 34ಮಾರು ಆಳದೂರದಲ್ಲಿ ದೇವಗಡ ಸಮೀಪ ಎಳೆದು ತರುತ್ತಿದ್ದಾಗ ಬೋಟ್ ಸಂಪೂರ್ಣ ಮುಳುಗಡೆಗೊಂಡಿತು ಎನ್ನಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…