ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು, ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏಕನಾಥ್ ಶಿಂಧೆ, ಅಜಿತ್ ಪವಾರ್ಗೆ ಡಿಸಿಎಂ ಹುದ್ದೆಯೇ ಗಟ್ಟಿಯಾಗಿದೆ. ಸರ್ಕಾರ ರಚನೆಯ ಮೈತ್ರಿ ಸೂತ್ರ ಇಂದು ರಿವೀಲ್ ಆಗಲಿದೆ.
ಈಗ ಮುಂಗಾರು ಕಮ್ಮಿ ಆಗಿದೆ ಅಂತಾ ಕರಾವಳಿಯಲ್ಲಿ ನಿಮ್ಮ ಮನೆ ಕಟ್ಟಲು ಧೈರ್ಯ ಮಾಡಬೇಡಿ. ನಾನು ಸಮುದ್ರ ಇದ್ದಂತೆ, ಮತ್ತೆ ಬಂದೇ ಬರುತ್ತೇನೆ ಎಂದು 2019ರಲ್ಲಿ ದೇವೇಂದ್ರ ಫಡ್ನವೀಸ್ ಅಂದಿನ ಸಿಎಂ ಉದ್ಧವ್ ಠಾಕ್ರೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎಚ್ಚರಿಕೆ ನೀಡಿದ್ದರು. ಅದಾಗಿ ಐದು ವರ್ಷಕ್ಕೇ ಅವತ್ತಿನ ವಾರ್ನಿಂಗ್ ನಿಜವಾಗಿದೆ. ಸಿಎಂ ಕುರ್ಚಿಗಾಗಿ ಬಿಜೆಪಿ ಸಂಬಂಧವನ್ನು ಮುರಿದುಕೊಂಡಿದ್ದ ಉದ್ಧವ್ ಠಾಕ್ರೆಗೆ ಈಗ ನೆಲೆಯೇ ಇಲ್ಲದಂತೆ ಫಡ್ನವೀಸ್ ಮಾಡಿದ್ದಾರೆ. ಅಂದು ಶಿವಸೇನೆಯ ನಡೆಯಿಂದ ಸಿಎಂ ಸ್ಥಾನದಿಂದ ವಂಚಿತರಾಗಿದ್ದ ದೇವೇಂದ್ರ ಫಡ್ನವೀಸ್ ಈಗ ಮತ್ತೊಮ್ಮೆ ಮಹಾರಾಷ್ಟ್ರದ ಸಿಎಂ ಆಗುತ್ತಿದ್ದು, ಐದು ವರ್ಷದಲ್ಲಿ ತಮ್ಮ ತಾಕತ್ತು ಏನು ಎಂಬುದನ್ನು ಉದ್ಧವ್ ಠಾಕ್ರೆ ಸೇರಿ ಮಹಾ ವಿಕಾಸ್ ಅಘಾಡಿಗೆ ತೋರಿಸಿದ್ದಾರೆ. ಈ ಮೂಲಕ ಐದು ವರ್ಷದ ಹಿಂದೆ ಸಮುದ್ರದಂತೆ ನಾನು ವಾಪಸ್ ಬರುತ್ತೇನೆ ಎಂದು ಮಾಡಿದ್ದ ಶಪಥವನ್ನು ಈಡೇರಿಸಿದ್ದಾರೆ.
ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಹೊರಬಿದ್ದು ಬರೋಬ್ಬರಿ 12 ದಿನಗಳು ಕಳೆದ ಬಳಿಕ ಮಹಾಯುತಿ ಸರ್ಕಾರ ರಚನೆಯಾಗುತ್ತಿದೆ. ಬಿಜೆಪಿ, ಶಿವಸೇನೆ ನಡುವೆ ಸಿಎಂ ಕುರ್ಚಿಗಾಗಿ ನಡೆಯುತ್ತಿದ್ದ ಹಾವು ಏಣಿ ಆಟ ಅಂತ್ಯವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಇಂದು ಬಿಜೆಪಿಯ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಿಎಂ ಆಗಿದ್ದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…