ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು, ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏಕನಾಥ್ ಶಿಂಧೆ, ಅಜಿತ್ ಪವಾರ್ಗೆ ಡಿಸಿಎಂ ಹುದ್ದೆಯೇ ಗಟ್ಟಿಯಾಗಿದೆ. ಸರ್ಕಾರ ರಚನೆಯ ಮೈತ್ರಿ ಸೂತ್ರ ಇಂದು ರಿವೀಲ್ ಆಗಲಿದೆ.
ಈಗ ಮುಂಗಾರು ಕಮ್ಮಿ ಆಗಿದೆ ಅಂತಾ ಕರಾವಳಿಯಲ್ಲಿ ನಿಮ್ಮ ಮನೆ ಕಟ್ಟಲು ಧೈರ್ಯ ಮಾಡಬೇಡಿ. ನಾನು ಸಮುದ್ರ ಇದ್ದಂತೆ, ಮತ್ತೆ ಬಂದೇ ಬರುತ್ತೇನೆ ಎಂದು 2019ರಲ್ಲಿ ದೇವೇಂದ್ರ ಫಡ್ನವೀಸ್ ಅಂದಿನ ಸಿಎಂ ಉದ್ಧವ್ ಠಾಕ್ರೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎಚ್ಚರಿಕೆ ನೀಡಿದ್ದರು. ಅದಾಗಿ ಐದು ವರ್ಷಕ್ಕೇ ಅವತ್ತಿನ ವಾರ್ನಿಂಗ್ ನಿಜವಾಗಿದೆ. ಸಿಎಂ ಕುರ್ಚಿಗಾಗಿ ಬಿಜೆಪಿ ಸಂಬಂಧವನ್ನು ಮುರಿದುಕೊಂಡಿದ್ದ ಉದ್ಧವ್ ಠಾಕ್ರೆಗೆ ಈಗ ನೆಲೆಯೇ ಇಲ್ಲದಂತೆ ಫಡ್ನವೀಸ್ ಮಾಡಿದ್ದಾರೆ. ಅಂದು ಶಿವಸೇನೆಯ ನಡೆಯಿಂದ ಸಿಎಂ ಸ್ಥಾನದಿಂದ ವಂಚಿತರಾಗಿದ್ದ ದೇವೇಂದ್ರ ಫಡ್ನವೀಸ್ ಈಗ ಮತ್ತೊಮ್ಮೆ ಮಹಾರಾಷ್ಟ್ರದ ಸಿಎಂ ಆಗುತ್ತಿದ್ದು, ಐದು ವರ್ಷದಲ್ಲಿ ತಮ್ಮ ತಾಕತ್ತು ಏನು ಎಂಬುದನ್ನು ಉದ್ಧವ್ ಠಾಕ್ರೆ ಸೇರಿ ಮಹಾ ವಿಕಾಸ್ ಅಘಾಡಿಗೆ ತೋರಿಸಿದ್ದಾರೆ. ಈ ಮೂಲಕ ಐದು ವರ್ಷದ ಹಿಂದೆ ಸಮುದ್ರದಂತೆ ನಾನು ವಾಪಸ್ ಬರುತ್ತೇನೆ ಎಂದು ಮಾಡಿದ್ದ ಶಪಥವನ್ನು ಈಡೇರಿಸಿದ್ದಾರೆ.
ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಹೊರಬಿದ್ದು ಬರೋಬ್ಬರಿ 12 ದಿನಗಳು ಕಳೆದ ಬಳಿಕ ಮಹಾಯುತಿ ಸರ್ಕಾರ ರಚನೆಯಾಗುತ್ತಿದೆ. ಬಿಜೆಪಿ, ಶಿವಸೇನೆ ನಡುವೆ ಸಿಎಂ ಕುರ್ಚಿಗಾಗಿ ನಡೆಯುತ್ತಿದ್ದ ಹಾವು ಏಣಿ ಆಟ ಅಂತ್ಯವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಇಂದು ಬಿಜೆಪಿಯ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಿಎಂ ಆಗಿದ್ದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…