Featured

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಆಗಿ ದೇವೇಂದ್ರ ಫಡ್ನವೀಸ್ ಇಂದು ಪ್ರಮಾಣವಚನ – vishwanews24

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಆಗಿ ದೇವೇಂದ್ರ ಫಡ್ನವೀಸ್ ಇಂದು ಪ್ರಮಾಣವಚನ

ಡಿಸಿಎಂ ಆಗಿ ಶಿಂಧೆ, ಅಜಿತ್ ಪವಾರ್ ಪದಗ್ರಹಣ

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್  ಆಯ್ಕೆಯಾಗಿದ್ದು, ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏಕನಾಥ್ ಶಿಂಧೆ, ಅಜಿತ್ ಪವಾರ್‌ಗೆ ಡಿಸಿಎಂ ಹುದ್ದೆಯೇ ಗಟ್ಟಿಯಾಗಿದೆ. ಸರ್ಕಾರ ರಚನೆಯ ಮೈತ್ರಿ ಸೂತ್ರ ಇಂದು ರಿವೀಲ್ ಆಗಲಿದೆ.

ಈಗ ಮುಂಗಾರು ಕಮ್ಮಿ ಆಗಿದೆ ಅಂತಾ ಕರಾವಳಿಯಲ್ಲಿ ನಿಮ್ಮ ಮನೆ ಕಟ್ಟಲು ಧೈರ್ಯ ಮಾಡಬೇಡಿ. ನಾನು ಸಮುದ್ರ ಇದ್ದಂತೆ, ಮತ್ತೆ ಬಂದೇ ಬರುತ್ತೇನೆ ಎಂದು 2019ರಲ್ಲಿ ದೇವೇಂದ್ರ ಫಡ್ನವೀಸ್ ಅಂದಿನ ಸಿಎಂ ಉದ್ಧವ್ ಠಾಕ್ರೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎಚ್ಚರಿಕೆ ನೀಡಿದ್ದರು. ಅದಾಗಿ ಐದು ವರ್ಷಕ್ಕೇ ಅವತ್ತಿನ ವಾರ್ನಿಂಗ್ ನಿಜವಾಗಿದೆ. ಸಿಎಂ ಕುರ್ಚಿಗಾಗಿ ಬಿಜೆಪಿ ಸಂಬಂಧವನ್ನು ಮುರಿದುಕೊಂಡಿದ್ದ ಉದ್ಧವ್ ಠಾಕ್ರೆಗೆ ಈಗ ನೆಲೆಯೇ ಇಲ್ಲದಂತೆ ಫಡ್ನವೀಸ್ ಮಾಡಿದ್ದಾರೆ. ಅಂದು ಶಿವಸೇನೆಯ ನಡೆಯಿಂದ ಸಿಎಂ ಸ್ಥಾನದಿಂದ ವಂಚಿತರಾಗಿದ್ದ ದೇವೇಂದ್ರ ಫಡ್ನವೀಸ್ ಈಗ ಮತ್ತೊಮ್ಮೆ ಮಹಾರಾಷ್ಟ್ರದ  ಸಿಎಂ ಆಗುತ್ತಿದ್ದು, ಐದು ವರ್ಷದಲ್ಲಿ ತಮ್ಮ ತಾಕತ್ತು ಏನು ಎಂಬುದನ್ನು ಉದ್ಧವ್ ಠಾಕ್ರೆ ಸೇರಿ ಮಹಾ ವಿಕಾಸ್ ಅಘಾಡಿಗೆ ತೋರಿಸಿದ್ದಾರೆ. ಈ ಮೂಲಕ ಐದು ವರ್ಷದ ಹಿಂದೆ ಸಮುದ್ರದಂತೆ ನಾನು ವಾಪಸ್ ಬರುತ್ತೇನೆ ಎಂದು ಮಾಡಿದ್ದ ಶಪಥವನ್ನು ಈಡೇರಿಸಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಹೊರಬಿದ್ದು ಬರೋಬ್ಬರಿ 12 ದಿನಗಳು ಕಳೆದ ಬಳಿಕ ಮಹಾಯುತಿ ಸರ್ಕಾರ ರಚನೆಯಾಗುತ್ತಿದೆ. ಬಿಜೆಪಿ, ಶಿವಸೇನೆ ನಡುವೆ ಸಿಎಂ ಕುರ್ಚಿಗಾಗಿ ನಡೆಯುತ್ತಿದ್ದ ಹಾವು ಏಣಿ ಆಟ ಅಂತ್ಯವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಇಂದು ಬಿಜೆಪಿಯ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಿಎಂ ಆಗಿದ್ದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ.

 

Vishwa News 24

Recent Posts

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

10 minutes ago

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

1 hour ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

1 hour ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

2 hours ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

2 hours ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

3 hours ago