ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು, ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏಕನಾಥ್ ಶಿಂಧೆ, ಅಜಿತ್ ಪವಾರ್ಗೆ ಡಿಸಿಎಂ ಹುದ್ದೆಯೇ ಗಟ್ಟಿಯಾಗಿದೆ. ಸರ್ಕಾರ ರಚನೆಯ ಮೈತ್ರಿ ಸೂತ್ರ ಇಂದು ರಿವೀಲ್ ಆಗಲಿದೆ.
ಈಗ ಮುಂಗಾರು ಕಮ್ಮಿ ಆಗಿದೆ ಅಂತಾ ಕರಾವಳಿಯಲ್ಲಿ ನಿಮ್ಮ ಮನೆ ಕಟ್ಟಲು ಧೈರ್ಯ ಮಾಡಬೇಡಿ. ನಾನು ಸಮುದ್ರ ಇದ್ದಂತೆ, ಮತ್ತೆ ಬಂದೇ ಬರುತ್ತೇನೆ ಎಂದು 2019ರಲ್ಲಿ ದೇವೇಂದ್ರ ಫಡ್ನವೀಸ್ ಅಂದಿನ ಸಿಎಂ ಉದ್ಧವ್ ಠಾಕ್ರೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎಚ್ಚರಿಕೆ ನೀಡಿದ್ದರು. ಅದಾಗಿ ಐದು ವರ್ಷಕ್ಕೇ ಅವತ್ತಿನ ವಾರ್ನಿಂಗ್ ನಿಜವಾಗಿದೆ. ಸಿಎಂ ಕುರ್ಚಿಗಾಗಿ ಬಿಜೆಪಿ ಸಂಬಂಧವನ್ನು ಮುರಿದುಕೊಂಡಿದ್ದ ಉದ್ಧವ್ ಠಾಕ್ರೆಗೆ ಈಗ ನೆಲೆಯೇ ಇಲ್ಲದಂತೆ ಫಡ್ನವೀಸ್ ಮಾಡಿದ್ದಾರೆ. ಅಂದು ಶಿವಸೇನೆಯ ನಡೆಯಿಂದ ಸಿಎಂ ಸ್ಥಾನದಿಂದ ವಂಚಿತರಾಗಿದ್ದ ದೇವೇಂದ್ರ ಫಡ್ನವೀಸ್ ಈಗ ಮತ್ತೊಮ್ಮೆ ಮಹಾರಾಷ್ಟ್ರದ ಸಿಎಂ ಆಗುತ್ತಿದ್ದು, ಐದು ವರ್ಷದಲ್ಲಿ ತಮ್ಮ ತಾಕತ್ತು ಏನು ಎಂಬುದನ್ನು ಉದ್ಧವ್ ಠಾಕ್ರೆ ಸೇರಿ ಮಹಾ ವಿಕಾಸ್ ಅಘಾಡಿಗೆ ತೋರಿಸಿದ್ದಾರೆ. ಈ ಮೂಲಕ ಐದು ವರ್ಷದ ಹಿಂದೆ ಸಮುದ್ರದಂತೆ ನಾನು ವಾಪಸ್ ಬರುತ್ತೇನೆ ಎಂದು ಮಾಡಿದ್ದ ಶಪಥವನ್ನು ಈಡೇರಿಸಿದ್ದಾರೆ.
ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಹೊರಬಿದ್ದು ಬರೋಬ್ಬರಿ 12 ದಿನಗಳು ಕಳೆದ ಬಳಿಕ ಮಹಾಯುತಿ ಸರ್ಕಾರ ರಚನೆಯಾಗುತ್ತಿದೆ. ಬಿಜೆಪಿ, ಶಿವಸೇನೆ ನಡುವೆ ಸಿಎಂ ಕುರ್ಚಿಗಾಗಿ ನಡೆಯುತ್ತಿದ್ದ ಹಾವು ಏಣಿ ಆಟ ಅಂತ್ಯವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಇಂದು ಬಿಜೆಪಿಯ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಿಎಂ ಆಗಿದ್ದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…