ಮುಂಬೈ : ಮಹಾರಾಷ್ಟ್ರದ ನಾಸಿಕ್ನ ಆಸ್ಪತ್ರೆಯೊಂದರ ಹೊರಗೆ ಮಂಗಳವಾರ ಆಮ್ಲಜನಕದ ಟ್ಯಾಂಕರ್ ಸೋರಿಕೆಯಾದ ಕಾರಣ ಆಕ್ಸಿಜನ್ ಕೊರತೆಯಿಂದಾಗಿ 22 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಟ್ಯಾಂಕರ್ ಸೋರಿಕೆಯಾದ ಪರಿಣಾಮ ಸುಮಾರು 30 ನಿಮಿಷಗಳ ಕಾಲ ಆಮ್ಲಜನಕದ ಪೂರೈಕೆ ಸ್ಥಗಿತಗೊಂಡಿತ್ತು.
ಕೊರೊನಾ ಸೋಂಕಿತರಿಗಾಗಿ ಮೀಸಲಾಗಿರುವ ನಗರದ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಸುಮಾರು 150 ಕೊರೊನಾ ರೋಗಿಗಳನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಮೃತರೆಲ್ಲರಿಗೂ ವೆಂಟಿಲೇಟರ್ ಇರಿಸಲಾಗಿತ್ತು. ಅವರಿಗೆ ನಿರಂತರ ಆಮ್ಲಜನರದ ಪೂರೈಕೆಯೂ ಅತ್ಯಗತ್ಯವಾಗಿತ್ತು.
ಶಿರ್ವ : ಗ್ರಾ.ಪಂ.ಅಧ್ಯಕ್ಷ ಚುನಾವಣೆ : ಅಧ್ಯಕ್ಷ ಗಾದಿ ಕಾಂಗ್ರೆಸ್ ತೆಕ್ಕೆಗೆ -Vishwanews24
ಈ ಬಗ್ಗೆ ಮಾತನಾಡಿದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ, ಆಮ್ಲಜನಕದ ಪೂರೈಕೆ ಸ್ಥಗಿತವೇ ಸಾವಿಗೆ ಕಾರಣವಾಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ನಾಸಿಕ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದಾರೆ. ಈ ರೋಗಿಗಳಿಗೆ ಆಮ್ಲಜನಕವನ್ನು ಪೂರೈಸುತ್ತಿದ್ದ ಆಮ್ಲಜನಕ ಟ್ಯಾಂಕರ್ನಲ್ಲಿ ಸೋರಿಕೆ ಕಂಡುಬಂದಿದೆ. ಈ ಹಿನ್ನೆಲೆ ಆಮ್ಲಜನಕ ಲಭಿಸದೆ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಟ್ಯಾಂಕರ್ನಿಂದ ವೇಗವಾಗಿ ಅನಿಲ ಸೋರಿಕೆಯಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಳಿ ಹೊಗೆ ಆವರಿಸಿರುವುದೆ. ಇನ್ನು ಆಮ್ಲಜನಕದ ಪೂರೈಕೆ ಸ್ಥಗಿತವಾದ್ದರಿಂದ ರೋಗಿಗಳು ಮತ್ತು ಅವರ ಕುಟುಂಬ ಸದಸ್ಯರು ಆತಂಕಕ್ಕೆ ಒಳಗಾಗಿ ಉಸಿರಾಟದ ತೊಂದರೆ ಇರುವ ರೋಗಿಗಳಿಗೆ ಸಹಾಯ ಮಾಡುವ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿಗಳು ಆಗಮಿಸಿದ್ದು ಸೋರಿಕೆ ನಿಯಂತ್ರಿಸಲು ಕಾಯಚರಣೆ ನಡೆಸಲಾಗುತ್ತಿದೆ. ಆಮ್ಲಜನಕ ಅಗತ್ಯವಿರುವ 80 ರೋಗಿಗಳ ಪೈಕಿ 31 ರೋಗಿಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಕೇಂದ್ರ ಸರ್ಕಾರದ ಲಸಿಕೆ ತಂತ್ರವು ನೋಟ್ ಬ್ಯಾನ್ಗಿಂತ ಕಡಿಮೆಯೇನಿಲ್ಲ : ರಾಹುಲ್ ಗಾಂಧಿ -Vishwanews24
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…