ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24
ಮಹಾರಾಷ್ಟ್ರ : ಮಳೆ ಅಬ್ಬರ – ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ
ರತ್ನಗಿರಿ: ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರವಿವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ರತ್ನಗಿರಿ ರೈಲು ನಿಲ್ದಾಣ ದ ಛಾವಣಿಯ ಒಂದು ಭಾಗ ಕುಸಿದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಿಲ್ದಾಣದ ಹೊರಭಾಗದಲ್ಲಿ 50 ಅಡಿ ಎತ್ತರದ ಛಾವಣಿಯ ಭಾಗ ನೆಲದ ಮೇಲೆ ಬಿದ್ದಿದೆ.
ಭಾರೀ ಮಳೆಯ ಕಾರಣದಿಂದಾಗಿ ಛಾವಣಿ ಕುಸಿತದ ಸಮಯದಲ್ಲಿ ಆ ಪ್ರದೇಶದಲ್ಲಿ ಜನರ ಓಡಾಟ ಕಡಿಮೆ ಇದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ನಿಲ್ದಾಣವನ್ನು ಕೇವಲ ಎರಡು ವರ್ಷಗಳ ಹಿಂದೆ ನವೀಕರಿಸಲಾಗಿತ್ತು. ಎರಡೇ ವರ್ಷದಲ್ಲಿ ಈ ಘಟನೆ ನಡೆದಿದ್ದು, ಕಳಪೆ ಗುಣಮಟ್ಟದ ನಿರ್ಮಾಣದ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ. ಲೋಕೋಪಯೋಗಿ ಇಲಾಖೆಯಿಂದ ತೊಡಗಿಸಿಕೊಂಡಿರುವ ಸಂಸ್ಥೆಯಿಂದ ನವೀಕರಣ ಕಾರ್ಯ ನಡೆದಿತ್ತು.
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ – vishwanews24
ಕಳೆದ ವರ್ಷ ಛಾವಣಿ ಸೋರಿಕೆ ಸಂಭವಿಸಿದ್ದು, ಕಳಪೆ ಗುಣಮಟ್ಟದ ಕಾಮಗಾರಿಯ ಬಗ್ಗೆ ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು.
ಕಳೆದ ವರ್ಷ ಛಾವಣಿ ಸೋರಿಕೆ ಸಂಭವಿಸಿದ್ದು, ಕಳಪೆ ಗುಣಮಟ್ಟದ ಕಾಮಗಾರಿಯ ಬಗ್ಗೆ ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು.
ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮುಂಬೈ, ಕೊಂಕಣ ಪ್ರದೇಶ, ಮಧ್ಯ ಮಹಾರಾಷ್ಟ್ರ ಮತ್ತು ವಿದರ್ಭ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯಾದ್ಯಂತ ಪ್ರವಾಹ, ಕುಸಿತ ಮತ್ತು ಭೂಕುಸಿತಗಳು ವರದಿಯಾಗಿವೆ.
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24
ಮುಂಬೈ, ಥಾಣೆ, ಪಾಲ್ಸರ್, ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಶಾಲೆಗಳಿಗೆ ರಜೆ ನೀಡಲಾಗಿದ್ದು, ಜನರು ಮನೆಯಲ್ಲೇ ಇರುವಂತೆ ತಿಳಿಸಲಾಗಿದೆ.
