ನವದೆಹಲಿ: ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ನಾಳೆ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕೆಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು. ನ್ಯಾಯಾಧೀಶರು ಬಿಹಾರ ಮತ್ತು ಉತ್ತರಾಖಂಡ ತೀರ್ಪುಗಳನ್ನು ಉಲ್ಲೇಖಿಸಿದರು. ತಕ್ಷಣವೇ ಹಂಗಾಮಿ ಸ್ಪೀಕರ್ ನೇಮಕವಾಗಬೇಕು. ವಿಶ್ವಾಸಮತ ಸಾಬೀತು ಮಾಡುವ ದೃಶ್ಯಗಳನ್ನು ಚಿತ್ರೀಕರಿಸಬೇಕು. ಬಹುಮತದ ಸಂಪೂರ್ಣ ಪ್ರಕ್ರಿಯೆಯನ್ನು ಹಂಗಾಮಿ ಸ್ಪೀಕರ್ ನೋಡಿಕೊಳ್ಳಬೇಕು. ಬಹುಮತ ಸಾಬೀತು ಪ್ರಕ್ರಿಯೆ ನೇರಪ್ರಸಾರ ಆಗಬೇಕು ಮತ್ತು ಗೌಪ್ಯ ಮತದಾನಕ್ಕೆ ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಭಾನುವಾರ ಸಲ್ಲಿಕೆಯಾದ ರಿಟ್ ಅರ್ಜಿ ಸತತ ಎರಡು ದಿನಗಳ ವಿಚಾರಣೆ ನಡೆದಿದೆ. ಸೋಮವಾರ ವಾದ – ಪ್ರತಿವಾದ ಕೊನೆಯಾಗಿ ಜಸ್ಟೀಸ್ ಎನ್.ವಿ ರಮಣ್ ನೇತೃತ್ವದ ಪೀಠ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪು ಇಂದು 10.30ಕ್ಕೆ ಪ್ರಕಟ ಮಾಡಿದ್ದಾರೆ.
ಇದೇ ವೇಳೆ ನ್ಯಾಯಪೀಠ ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತಿಗೆ ಆದೇಶ ನೀಡಿದೆ. ಇದೇ ವೇಳೆ ನ್ಯಾಯಾಪೀಠ ಬಹುಮತ ಸಾಬೀತು ಮಾಡುವ ವೇಳೆ ಗುಪ್ತಮತದಾನವಾಗಬಾರದು ಇದಲ್ಲದೇ ಎಲ್ಲವೂ ನೇರಪ್ರಸಾರವಾಗಬೇಕು ಅಂತ ‘ಸುಪ್ರೀಂಕೋರ್ಟ್ ಹೇಳಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…