ನವದೆಹಲಿ: ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ನಾಳೆ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕೆಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು. ನ್ಯಾಯಾಧೀಶರು ಬಿಹಾರ ಮತ್ತು ಉತ್ತರಾಖಂಡ ತೀರ್ಪುಗಳನ್ನು ಉಲ್ಲೇಖಿಸಿದರು. ತಕ್ಷಣವೇ ಹಂಗಾಮಿ ಸ್ಪೀಕರ್ ನೇಮಕವಾಗಬೇಕು. ವಿಶ್ವಾಸಮತ ಸಾಬೀತು ಮಾಡುವ ದೃಶ್ಯಗಳನ್ನು ಚಿತ್ರೀಕರಿಸಬೇಕು. ಬಹುಮತದ ಸಂಪೂರ್ಣ ಪ್ರಕ್ರಿಯೆಯನ್ನು ಹಂಗಾಮಿ ಸ್ಪೀಕರ್ ನೋಡಿಕೊಳ್ಳಬೇಕು. ಬಹುಮತ ಸಾಬೀತು ಪ್ರಕ್ರಿಯೆ ನೇರಪ್ರಸಾರ ಆಗಬೇಕು ಮತ್ತು ಗೌಪ್ಯ ಮತದಾನಕ್ಕೆ ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಭಾನುವಾರ ಸಲ್ಲಿಕೆಯಾದ ರಿಟ್ ಅರ್ಜಿ ಸತತ ಎರಡು ದಿನಗಳ ವಿಚಾರಣೆ ನಡೆದಿದೆ. ಸೋಮವಾರ ವಾದ – ಪ್ರತಿವಾದ ಕೊನೆಯಾಗಿ ಜಸ್ಟೀಸ್ ಎನ್.ವಿ ರಮಣ್ ನೇತೃತ್ವದ ಪೀಠ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪು ಇಂದು 10.30ಕ್ಕೆ ಪ್ರಕಟ ಮಾಡಿದ್ದಾರೆ.
ಇದೇ ವೇಳೆ ನ್ಯಾಯಪೀಠ ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತಿಗೆ ಆದೇಶ ನೀಡಿದೆ. ಇದೇ ವೇಳೆ ನ್ಯಾಯಾಪೀಠ ಬಹುಮತ ಸಾಬೀತು ಮಾಡುವ ವೇಳೆ ಗುಪ್ತಮತದಾನವಾಗಬಾರದು ಇದಲ್ಲದೇ ಎಲ್ಲವೂ ನೇರಪ್ರಸಾರವಾಗಬೇಕು ಅಂತ ‘ಸುಪ್ರೀಂಕೋರ್ಟ್ ಹೇಳಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…