ಮುಂಬೈ: ಮಹಾರಾಷ್ಟ್ರ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಮತ್ತೆ ಮುಂದುವರಿಯಲಿದೆ.
ಎನ್ಸಿಪಿ ಹಾಗೂ ಕಾಂಗ್ರೆಸ್ ನಾಯಕರನ್ನು ಬಿಜೆಪಿಗೆ ಬರ ಮಾಡಿಕೊಂಡ ನಂತರ ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ‘ಉಭಯ ಪಕ್ಷಗಳು ಒಟ್ಟಿಗೆ ಚುನಾವಣೆ ಎದುರಿಸಲಿವೆ. ಈ ಬಾರಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ಮೂಲಕ ಈ ಹಿಂದಿನ ದಾಖಲೆಗಳನ್ನು ನಮ್ಮ ಮೈತ್ರಿ ಮುರಿಯಲಿದೆ’ ಎಂದರು.
ಇತ್ತೀಚೆಗೆ ಎನ್ಸಿಪಿ ಹಾಗೂ ಕಾಂಗ್ರೆಸ್ ನಾಯಕರು ಬಿಜೆಪಿಗೆ ವಲಸೆ ಹೋಗುತ್ತಿದ್ದಾರೆ. ಪಕ್ಷ ತೊರೆದು ಬಂದವರಿಗೆ ಟಿಕೆಟ್ ನೀಡಬೇಕಾದ ಒತ್ತಡದಲ್ಲಿರುವ ಬಿಜೆಪಿ ಈ ಬಾರಿ ಶಿವಸೇನಾ ಜೊತೆ ಮೈತ್ರಿಗೆ ಮುಂದಾಗುವುದಿಲ್ಲ ಎಂಬ ವದಂತಿ ಇತ್ತು. ಫಡಣವೀಸ್ ಅವರ ಈ ಹೇಳಿಕೆಯಿಂದ ಇಂತಹ ಎಲ್ಲ ವದಂತಿಗೆ ತೆರೆಬಿದ್ದಿದೆ.
ಈ ಎರಡೂ ಪಕ್ಷಗಳು 2014ರಲ್ಲಿ ಪ್ರತ್ಯೇಕವಾಗಿಯೇ ಚುನಾವಣೆಯನ್ನು ಎದುರಿಸಿದ್ದವು. ಫಲಿತಾಂಶ ಹೊರ ಬಿದ್ದ ನಂತರ ಸರ್ಕಾರ ರಚನೆಗಾಗಿ ಎರಡೂ ಪಕ್ಷಗಳು ಕೈಜೋಡಿಸಿವೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…