ಮುಂಬೈ: ಮಹಾರಾಷ್ಟ್ರ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಮತ್ತೆ ಮುಂದುವರಿಯಲಿದೆ.
ಎನ್ಸಿಪಿ ಹಾಗೂ ಕಾಂಗ್ರೆಸ್ ನಾಯಕರನ್ನು ಬಿಜೆಪಿಗೆ ಬರ ಮಾಡಿಕೊಂಡ ನಂತರ ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ‘ಉಭಯ ಪಕ್ಷಗಳು ಒಟ್ಟಿಗೆ ಚುನಾವಣೆ ಎದುರಿಸಲಿವೆ. ಈ ಬಾರಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ಮೂಲಕ ಈ ಹಿಂದಿನ ದಾಖಲೆಗಳನ್ನು ನಮ್ಮ ಮೈತ್ರಿ ಮುರಿಯಲಿದೆ’ ಎಂದರು.
ಇತ್ತೀಚೆಗೆ ಎನ್ಸಿಪಿ ಹಾಗೂ ಕಾಂಗ್ರೆಸ್ ನಾಯಕರು ಬಿಜೆಪಿಗೆ ವಲಸೆ ಹೋಗುತ್ತಿದ್ದಾರೆ. ಪಕ್ಷ ತೊರೆದು ಬಂದವರಿಗೆ ಟಿಕೆಟ್ ನೀಡಬೇಕಾದ ಒತ್ತಡದಲ್ಲಿರುವ ಬಿಜೆಪಿ ಈ ಬಾರಿ ಶಿವಸೇನಾ ಜೊತೆ ಮೈತ್ರಿಗೆ ಮುಂದಾಗುವುದಿಲ್ಲ ಎಂಬ ವದಂತಿ ಇತ್ತು. ಫಡಣವೀಸ್ ಅವರ ಈ ಹೇಳಿಕೆಯಿಂದ ಇಂತಹ ಎಲ್ಲ ವದಂತಿಗೆ ತೆರೆಬಿದ್ದಿದೆ.
ಈ ಎರಡೂ ಪಕ್ಷಗಳು 2014ರಲ್ಲಿ ಪ್ರತ್ಯೇಕವಾಗಿಯೇ ಚುನಾವಣೆಯನ್ನು ಎದುರಿಸಿದ್ದವು. ಫಲಿತಾಂಶ ಹೊರ ಬಿದ್ದ ನಂತರ ಸರ್ಕಾರ ರಚನೆಗಾಗಿ ಎರಡೂ ಪಕ್ಷಗಳು ಕೈಜೋಡಿಸಿವೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…