ಮುಂಬೈ: ಮಹಾರಾಷ್ಟ್ರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗುರುವಾರ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಇಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಉನ್ನತ ಹುದ್ದೆಗೆ ಅಂತಿಮಗೊಳಿಸಲಾಯಿತು.
ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ದೇವೇಂದ್ರ ಫಡ್ನವೀಸ್ ಉಪಸ್ಥಿತರಿದ್ದರು. ಬಿಜೆಪಿ ತನ್ನ ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಿತ್ತು.
ಶಾಸಕಾಂಗ ಪಕ್ಷದ ಸಭೆಗೆ ಮುನ್ನ ಬಿಜೆಪಿ ನಾಯಕ ಸುಧೀರ್ ಮುಂಗಂಟಿವಾರ್, ಮಹಾಯುತಿ ಮೈತ್ರಕೂಟ ನಾಯಕರು ಬುಧವಾರ ಮಧ್ಯಾಹ್ನ 3:30 ಕ್ಕೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ ಎಂದು ಹೇಳಿದ್ದರು.
ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಯಶಸ್ಸನ್ನು ಸಾಧಿಸಿದೆ. ರಾಜ್ಯದ 288 ವಿಧಾನಸಭಾ ಸ್ಥಾನಗಳ ಪೈಕಿ 132 ಸ್ಥಾನಗಳನ್ನು ಗೆದ್ದಿದೆ. ಇದು ರಾಜ್ಯದಲ್ಲಿ ಇದುವರೆಗಿನ ಅತ್ಯುತ್ತಮ ಸಾಧನೆಯಾಗಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…