Featured

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಚಿತ್ರ ಬಿಡಿಸುವ ಸ್ಪರ್ಧೆ : ಯಶ್‌ಪಾಲ್ ಎ. ಸುವರ್ಣ -Vishwanews24

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಚಿತ್ರ ಬಿಡಿಸುವ ಸ್ಪರ್ಧೆ : ಯಶ್‌ಪಾಲ್ ಎ. ಸುವರ್ಣ

ಮಹಾಲಕ್ಷಿö್ಮÃ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನದ
ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ದಿನಾಂಕ : ೦೧-೧೦-೨೦೨೨ ನೇ ಶನಿವಾರ ಬೆಳಿಗ್ಗೆ ೯.೩೦ಕ್ಕೆ ಮೊಗವೀರ ಭವನ ಉಚ್ಚಿಲದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಚಿತ್ರ ಬಿಡಿಸುವ ಸ್ಪರ್ಧೆಯ ಚಿತ್ರ ರಚನೆಯ ವಿಷಯವಾಗಿ ದಸರಾ ಮಹೋತ್ಸವವನ್ನು ಆಯ್ಕೆ ಮಾಡಿದ್ದು, ಸ್ಪರ್ಧಿಗಳು ಈ ವಿಷಯಕ್ಕೆ ಸಂಬAಧಿಸಿದ ಚಿತ್ರವನ್ನು ಬಿಡಿಸಬೇಕು. ಒಟ್ಟು ಐದು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಿದ್ದು ಕಿರಿಯರ ವಿಭಾಗ (೧ ರಿಂದ ೪ನೇ ತರಗತಿ), ಪ್ರಾಥಮಿಕ ವಿಭಾಗ ( ೫ ರಿಂದ ೭ ನೇ ತರಗತಿ), ಹೈಸ್ಕೂಲ್ ವಿಭಾಗ ( ೮ ರಿಂದ ೧೦ನೇ ತರಗತಿ), ಕಾಲೇಜು ವಿಭಾಗ (ಪದವಿ ಪೂರ್ವ ಮತ್ತು ಪದವಿ ತರಗತಿ) ಹಾಗೂ ಸಾರ್ವಜನಿಕ ವಿಭಾಗದಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧಾಳುಗಳಿಗೆ ಡ್ರಾಯಿಂಗ್ ಶೀಟ್ ಸ್ಥಳದಲ್ಲೇ ಒದಗಿಸಲಿದ್ದು, ಉಳಿದ ಪರಿಕರಗಳನ್ನು ಅವರೇ ತರತಕ್ಕದ್ದು.

ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ೩ ಸಮಾಧಾನಕರ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡಲಿದ್ದು, ವಿಜೇತರಿಗೆ ನಗದು ಬಹುಮಾನ, ಸ್ಮರಣಿಕೆ, ಪ್ರಶಸ್ತಿ ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಗುವುದು.

ಈ ಸ್ಪರ್ಧೆಯನ್ನು ಈ ಹಿಂದೆ ಸೆಪ್ಟೆಂಬರ್ ೨೫ ರಂದು ನಡೆಸಲು ನಿರ್ಧರಿಸಿದ್ದು, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮನವಿಯ ಮೇರೆಗೆ ಸ್ಪರ್ಧೆಯನ್ನು ಅಕ್ಟೋಬರ್ ೧ ನೇ ಶನಿವಾರ ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಆನ್‌ಲೈನ್ ನೋಂದಣಿಗಾಗಿ ಹಾಗೂ ಸ್ಫರ್ಧೆಯ ವಿವರಗಳು ಮಹಾಲಕ್ಷ್ಮಿ ಬ್ಯಾಂಕಿನ ವೆಬ್‌ಸೈಟ್ www.mahalakshmicoopbank.com ನಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ೯೯೬೪೦೨೩೩೪೪, ೯೯೭೨೧೨೦೩೩೨, ೯೬೮೬೧೨೪೭೬೯ ಸಂಪರ್ಕಿಸಬಹುದು. ಸಾರ್ವಜನಿಕರು ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

4 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

5 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

5 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

6 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

6 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

6 hours ago