Featured

ಮಹಾ ಕುಂಭಮೇಳ  ಪರಿಣಾಮ ವಾರಣಾಸಿಯ ಕಾಶಿ ದೇವಾಲಯಕ್ಕೆ ದಾಖಲೆಯ ಪ್ರಮಾಣದಲ್ಲಿ ಭೇಟಿ ನೀಡಿದ ಭಕ್ತರು  – vishwanews24

ಮಹಾ ಕುಂಭಮೇಳ  ಪರಿಣಾಮ ವಾರಣಾಸಿಯ ಕಾಶಿ ದೇವಾಲಯಕ್ಕೆ ದಾಖಲೆಯ ಪ್ರಮಾಣದಲ್ಲಿ ಭೇಟಿ ನೀಡಿದ ಭಕ್ತರು

ವಾರಾಣಾಸಿ: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳ  ಪರಿಣಾಮ ವಾರಣಾಸಿಯ ಕಾಶಿ ವಿಶ್ವನಾಥನ ದೇವಸ್ಥಾನಕ್ಕೆ ದಾಖಲೆಯ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡಿದ್ದಾರೆ. ಕಳೆದ 45 ದಿನಗಳಲ್ಲಿ ಮೂರು ಕೋಟಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ಶ್ರೀ ಕಾಶಿ ವಿಶ್ವನಾಥ ದೇವಾಲಯ ಟ್ರಸ್ಟ್ ಹೇಳಿದೆ.

ಶ್ರೀ ಕಾಶಿ ವಿಶ್ವನಾಥ ದೇವಾಲಯ ಟ್ರಸ್ಟ್ ಬಿಡುಗಡೆ ಮಾಡಿದ ಮಾಹಿತಿಗಳ ಪ್ರಕಾರ, ಪ್ರತಿದಿನ ಸರಾಸರಿ ಆರೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದು ದೇವಾಲಯದ ಇತಿಹಾಸದಲ್ಲಿ ಅತಿ ಹೆಚ್ಚು ದರ್ಶನ ಪಡೆದ ಭಕ್ತರ ಸಂಖ್ಯೆಯಾಗಿದೆ. ಶ್ರಾವಣಕ್ಕಿಂತ ಮಾಘ ಮತ್ತು ಫಾಲ್ಗುಣದಲ್ಲಿ ಹೆಚ್ಚಿನ ಭಕ್ತರು ದರ್ಶನ ಪಡೆದಿದ್ದಾರೆ.

ಮಹಾಶಿವರಾತ್ರಿ ಮತ್ತು ಮೌನಿ ಅಮಾವಾಸ್ಯೆಯಂದು ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಮೌನಿ ಅಮಾವಾಸ್ಯೆಯಂದು 11 ಲಕ್ಷಕ್ಕೂ ಹೆಚ್ಚು ಭಕ್ತರು ಬಂದಿದ್ದರೆ, ಮಹಾಶಿವರಾತ್ರಿಯಂದು 46 ಗಂಟೆಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಭಕ್ತರು ವಿಶ್ವನಾಥನ ದರ್ಶನ ಪಡೆದಿದ್ದಾರೆ.

ಜನವರಿ 13ರಿಂದ ಫೆಬ್ರವರಿ 19ರ ನಡುವೆ, ಭಕ್ತರ ಸಂಖ್ಯೆ ಎರಡು ಕೋಟಿ ಗಡಿ ದಾಟಿದೆ. ಫೆಬ್ರವರಿ 27ರಂದು ಬಿಡುಗಡೆಯಾದ ಮಾಹಿತಿಯ ಪ್ರಕಾರ, ಈ ಸಂಖ್ಯೆ ಮೂರು ಕೋಟಿ ತಲುಪಿದೆ. ಅಂದರೆ ಕೇವಲ ಎಂಟು ದಿನಗಳಲ್ಲಿ (ಫೆಬ್ರವರಿ 20ರಿಂದ 27ರವರೆಗೆ) ಒಂದು ಕೋಟಿಗೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದಾರೆ.

2022ರ ಶ್ರಾವಣ ಮಾಸದಲ್ಲಿ, ಒಂದು ಕೋಟಿಗೂ ಹೆಚ್ಚು ಭಕ್ತರು ವಿಶ್ವನಾಥನ ಜಲಾಭಿಷೇಕವನ್ನು ನೆರವೇರಿಸಿದ್ದರು. 2023ರಲ್ಲಿ ಭಕ್ತರ ಸಂಖ್ಯೆ ಹೊಸ ದಾಖಲೆಯನ್ನು ಸೃಷ್ಟಿಸಿತ್ತು. ಜುಲೈ 4 ರಿಂದ ಪ್ರಾರಂಭವಾದ 60 ದಿನಗಳ ಶ್ರಾವಣದಲ್ಲಿ 1.63 ಕೋಟಿ ಭಕ್ತರು ದರ್ಶನ ಪಡೆದಿದ್ದರು. 2024ರ ಶ್ರಾವಣ ಮಾಸದಲ್ಲಿ 53.84 ಲಕ್ಷ ಭಕ್ತರು ವಿಶ್ವನಾಥನ ಜಲಾಭಿಷೇಕ ನೆರವೇರಿಸಿದ್ದರು. ಇದೇ ಮೊದಲ ಬಾರಿಗೆ ಮೂರು ಕೋಟಿ ಭಕ್ತರು ಭೇಟಿ ನೀಡಿದ್ದಾರೆ.

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

16 seconds ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago