ಕೋಲ್ಕತ್ತಾ: ಮಹಾ ಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಮಂಗಳವಾರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಾತನಾಡಿದ ಬ್ಯಾನರ್ಜಿ, ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದುರುಪಯೋಗದ ಆರೋಪಗಳನ್ನು ಹೊರಿಸಿದ್ದಾರೆ.
ನಾನು ಮಹಾ ಕುಂಭಮೇಳವನ್ನು ಗೌರವಿಸುತ್ತೇನೆ. ಪವಿತ್ರ ಗಂಗಾ ಮಾತೆಯನ್ನು ಗೌರವಿಸುತ್ತೇನೆ. ಆದರೆ, ಸರಿಯಾದ ನಿರ್ವಹಣೆ ಇಲ್ಲ. ಶ್ರೀಮಂತರು, ವಿಐಪಿಗಳಿಗೆ 1 ಲಕ್ಷಕ್ಕೂ ಹೆಚ್ಚಿನ ಬೆಲೆಯಲ್ಲಿ ಶಿಬಿರಗಳನ್ನು [ಟೆಂಟ್ಗಳನ್ನು] ಪಡೆಯಲು ವ್ಯವಸ್ಥೆಗಳು ಲಭ್ಯವಿದೆ. ಬಡವರಿಗೆ ಕುಂಭಮೇಳದಲ್ಲಿ ಯಾವುದೇ ವ್ಯವಸ್ಥೆಗಳಿಲ್ಲ. ಹೆಚ್ಚು ಜನರು ಸೇರುವ ಕಡೆ ಕಾಲ್ತುಳಿತ ಸಾಮಾನ್ಯ. ಆದರೆ, ವ್ಯವಸ್ಥೆಗಳನ್ನು ಮಾಡುವುದು ಮುಖ್ಯ ಎಂದು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬಾಂಗ್ಲಾದೇಶದ ಮೂಲಭೂತವಾದಿಗಳೊಂದಿಗೆ ಸಂಪರ್ಕ ಹೊಂದಿದ್ದೇವೆ ಎಂಬ ಆರೋಪಗಳನ್ನು ಬಿಜೆಪಿ ಸಾಬೀತುಪಡಿಸಲಿ. ಒಂದು ವೇಳೆ ಸಾಬೀತುಪಡಿಸಿದರೆ, ನಾನು ರಾಜೀನಾಮೆ ನೀಡುತ್ತೇನೆ ಎಂದು ಬ್ಯಾನರ್ಜಿ ಸವಾಲು ಹಾಕಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…