ಕೋಲ್ಕತ್ತಾ: ಮಹಾ ಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಮಂಗಳವಾರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಾತನಾಡಿದ ಬ್ಯಾನರ್ಜಿ, ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದುರುಪಯೋಗದ ಆರೋಪಗಳನ್ನು ಹೊರಿಸಿದ್ದಾರೆ.
ನಾನು ಮಹಾ ಕುಂಭಮೇಳವನ್ನು ಗೌರವಿಸುತ್ತೇನೆ. ಪವಿತ್ರ ಗಂಗಾ ಮಾತೆಯನ್ನು ಗೌರವಿಸುತ್ತೇನೆ. ಆದರೆ, ಸರಿಯಾದ ನಿರ್ವಹಣೆ ಇಲ್ಲ. ಶ್ರೀಮಂತರು, ವಿಐಪಿಗಳಿಗೆ 1 ಲಕ್ಷಕ್ಕೂ ಹೆಚ್ಚಿನ ಬೆಲೆಯಲ್ಲಿ ಶಿಬಿರಗಳನ್ನು [ಟೆಂಟ್ಗಳನ್ನು] ಪಡೆಯಲು ವ್ಯವಸ್ಥೆಗಳು ಲಭ್ಯವಿದೆ. ಬಡವರಿಗೆ ಕುಂಭಮೇಳದಲ್ಲಿ ಯಾವುದೇ ವ್ಯವಸ್ಥೆಗಳಿಲ್ಲ. ಹೆಚ್ಚು ಜನರು ಸೇರುವ ಕಡೆ ಕಾಲ್ತುಳಿತ ಸಾಮಾನ್ಯ. ಆದರೆ, ವ್ಯವಸ್ಥೆಗಳನ್ನು ಮಾಡುವುದು ಮುಖ್ಯ ಎಂದು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬಾಂಗ್ಲಾದೇಶದ ಮೂಲಭೂತವಾದಿಗಳೊಂದಿಗೆ ಸಂಪರ್ಕ ಹೊಂದಿದ್ದೇವೆ ಎಂಬ ಆರೋಪಗಳನ್ನು ಬಿಜೆಪಿ ಸಾಬೀತುಪಡಿಸಲಿ. ಒಂದು ವೇಳೆ ಸಾಬೀತುಪಡಿಸಿದರೆ, ನಾನು ರಾಜೀನಾಮೆ ನೀಡುತ್ತೇನೆ ಎಂದು ಬ್ಯಾನರ್ಜಿ ಸವಾಲು ಹಾಕಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…