Featured

ಮಹಿಳಾ ಯೋಧರ ನೇಮಕಾತಿ : ಆನ್‌ಲೈನ್ ಮೂಲಕ 100 ಹುದ್ದೆಗೆ 2 ಲಕ್ಷ ಮಹಿಳೆಯರ ಅರ್ಜಿ ಸಲ್ಲಿಕೆ -Vishwanews24

ಹೊಸದಿಲ್ಲಿ, : ಸೇನೆಗೆ ಸೇರಲು ಮಹಿಳೆಯರ ಆಸಕ್ತಿ ಹೆಚ್ಚಾಗಿದೆ.  100 ಖಾಲಿ ಹುದ್ದೆಗಳಿಗೆ 2 ಲಕ್ಷ ಮಹಿಳೆಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ

ಯುದ್ಧ ವಿಮಾನ ಚಾಲನೆ ಮಾಡಲು ಆರು ಮಹಿಳಾ ಪೈಲಟ್‌ಗಳು ಇದೀಗ ತರಬೇತಿ ಪಡೆಯುತ್ತಿದ್ದು, ಇದೀಗ 15 ಲಕ್ಷ ಬಲದ ಪ್ರಬಲ ಸಶಸ್ತ್ರ ಪಡೆ ಹೊಸ ದಾಖಲೆ ಬರೆದಿದೆ. ಕಾಪ್ಸ್ ಆಫ್ ಮಿಲಿಟರಿ ಪೊಲೀಸ್ (ಸಿಎಂಪಿ) ಪಡೆಯ 100 ಖಾಲಿ ಹುದ್ದೆಗಳಿಗೆ 2 ಲಕ್ಷ ಮಹಿಳೆಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ಭಾರತೀಯ ಸೇನೆ ಇದೇ ಮೊದಲ ಬಾರಿಗೆ ಪ್ರಾಂತೀಯ ಸೇನೆಯಲ್ಲಿ ಮಹಿಳಾ ಪ್ರೊವೊಸ್ಟ್ ಯುನಿಟ್ ಆರಂಭಿಸಲು ಮುಂದಾಗಿದೆ. ಇಬ್ಬರು ಅಧಿಕಾರಿಗಳು ಮೂವರು ಕಿರಿಯ ನಿಯುಕ್ತ ಅಧಿಕಾರಿಗಳು ಹಾಗೂ 40 ಸೈನಿಕರು ಈ ಘಟಕದಲ್ಲಿರುತ್ತಾರೆ.

“ಮಹಿಳಾ ಯೋಧರ (ಸಾಮಾನ್ಯ ಕರ್ತವ್ಯ) ನೇಮಕ ನಿರ್ಧಾರ ಅತ್ಯಂತ ಮಹತ್ವದ್ದು.  ಎರಡು ಲಕ್ಷ ಮಹಿಳೆಯರು ಇದುವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು, ನೇಮಕಾತಿ ರ್ಯಾಲಿ ಈ ತಿಂಗಳ ಅಂತ್ಯಕ್ಕೆ ಬೆಳಗಾವಿಯಲ್ಲಿ ನಡೆಯಲಿದೆ” ಎಂದು ಸೇನೆಯ ಉನ್ನತ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಿಂತ ಕೆಳಗಿನ ಹುದ್ದೆಯಾದ ಪಿಬಿಒಆರ್ ಹುದ್ದೆಗಳಿಗೆ ಮುಂದಿನ 17 ವರ್ಷಗಳಲ್ಲಿ ಹಂತಹಂತವಾಗಿ 1,700 ಮಹಿಳೆಯರನ್ನು ನೇಮಿಸಿಕೊಳ್ಳಲು ಸೇನೆ ಉದ್ದೇಶಿಸಿದೆ.

ತರಬೇತಿಯ ನಂತರ, ಮಹಿಳಾ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಭಾಗದಲ್ಲಿ ಇರಿಸಲಾಗುವುದು. ಜನಸಂದಣಿಯನ್ನು ನಿಯಂತ್ರಿಸಲು ಮತ್ತು ಮಹಿಳಾ ಪ್ರದರ್ಶನಕಾರರನ್ನು ತಡೆಯುವುದು  ಮುಖ್ಯ ಕೆಲಸವಾಗಲಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago