Featured

ಮಹಿಳಾ ಯೋಧರ ನೇಮಕಾತಿ : ಆನ್‌ಲೈನ್ ಮೂಲಕ 100 ಹುದ್ದೆಗೆ 2 ಲಕ್ಷ ಮಹಿಳೆಯರ ಅರ್ಜಿ ಸಲ್ಲಿಕೆ -Vishwanews24

ಹೊಸದಿಲ್ಲಿ, : ಸೇನೆಗೆ ಸೇರಲು ಮಹಿಳೆಯರ ಆಸಕ್ತಿ ಹೆಚ್ಚಾಗಿದೆ.  100 ಖಾಲಿ ಹುದ್ದೆಗಳಿಗೆ 2 ಲಕ್ಷ ಮಹಿಳೆಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ

ಯುದ್ಧ ವಿಮಾನ ಚಾಲನೆ ಮಾಡಲು ಆರು ಮಹಿಳಾ ಪೈಲಟ್‌ಗಳು ಇದೀಗ ತರಬೇತಿ ಪಡೆಯುತ್ತಿದ್ದು, ಇದೀಗ 15 ಲಕ್ಷ ಬಲದ ಪ್ರಬಲ ಸಶಸ್ತ್ರ ಪಡೆ ಹೊಸ ದಾಖಲೆ ಬರೆದಿದೆ. ಕಾಪ್ಸ್ ಆಫ್ ಮಿಲಿಟರಿ ಪೊಲೀಸ್ (ಸಿಎಂಪಿ) ಪಡೆಯ 100 ಖಾಲಿ ಹುದ್ದೆಗಳಿಗೆ 2 ಲಕ್ಷ ಮಹಿಳೆಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ಭಾರತೀಯ ಸೇನೆ ಇದೇ ಮೊದಲ ಬಾರಿಗೆ ಪ್ರಾಂತೀಯ ಸೇನೆಯಲ್ಲಿ ಮಹಿಳಾ ಪ್ರೊವೊಸ್ಟ್ ಯುನಿಟ್ ಆರಂಭಿಸಲು ಮುಂದಾಗಿದೆ. ಇಬ್ಬರು ಅಧಿಕಾರಿಗಳು ಮೂವರು ಕಿರಿಯ ನಿಯುಕ್ತ ಅಧಿಕಾರಿಗಳು ಹಾಗೂ 40 ಸೈನಿಕರು ಈ ಘಟಕದಲ್ಲಿರುತ್ತಾರೆ.

“ಮಹಿಳಾ ಯೋಧರ (ಸಾಮಾನ್ಯ ಕರ್ತವ್ಯ) ನೇಮಕ ನಿರ್ಧಾರ ಅತ್ಯಂತ ಮಹತ್ವದ್ದು.  ಎರಡು ಲಕ್ಷ ಮಹಿಳೆಯರು ಇದುವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು, ನೇಮಕಾತಿ ರ್ಯಾಲಿ ಈ ತಿಂಗಳ ಅಂತ್ಯಕ್ಕೆ ಬೆಳಗಾವಿಯಲ್ಲಿ ನಡೆಯಲಿದೆ” ಎಂದು ಸೇನೆಯ ಉನ್ನತ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಿಂತ ಕೆಳಗಿನ ಹುದ್ದೆಯಾದ ಪಿಬಿಒಆರ್ ಹುದ್ದೆಗಳಿಗೆ ಮುಂದಿನ 17 ವರ್ಷಗಳಲ್ಲಿ ಹಂತಹಂತವಾಗಿ 1,700 ಮಹಿಳೆಯರನ್ನು ನೇಮಿಸಿಕೊಳ್ಳಲು ಸೇನೆ ಉದ್ದೇಶಿಸಿದೆ.

ತರಬೇತಿಯ ನಂತರ, ಮಹಿಳಾ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಭಾಗದಲ್ಲಿ ಇರಿಸಲಾಗುವುದು. ಜನಸಂದಣಿಯನ್ನು ನಿಯಂತ್ರಿಸಲು ಮತ್ತು ಮಹಿಳಾ ಪ್ರದರ್ಶನಕಾರರನ್ನು ತಡೆಯುವುದು  ಮುಖ್ಯ ಕೆಲಸವಾಗಲಿದೆ.

Vishwa News 24

Recent Posts

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

7 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

15 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

37 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago