ಮಂಗಳೂರು : ಬಾಂಗ್ಲಾದೇಶದಲ್ಲಿ ನಡೆಯುವ ಎರಡನೇ ವಿಶ್ವಕಪ್ ಕಬ್ಬಡಿ ಪಂದ್ಯಾಟಕ್ಕೆ ಭಾರತೀಯ ಕಬ್ಬಡಿ ತಂಡಕ್ಕೆ ಕರ್ನಾಟಕದಿಂದ ಮಂಗಳೂರಿನ ಯುವತಿ ಧನಲಕ್ಷ್ಮೀ ಪೂಜಾರಿ ಆಯ್ಕೆಯಾಗಿದ್ದಾರೆ. ಕರ್ನಾಟಕದ ಪರವಾಗಿ ರಾಷ್ಟ್ರೀಯ ಕಬ್ಬಡಿ ತಂಡಕ್ಕೆ ಧನಲಕ್ಷ್ಮೀ ಒಬ್ಬರೇ ಆಯ್ಕೆಯಾಗಿದ್ದಾರೆ.
ಸುರತ್ಕಲ್ ಇಡ್ಯಾ ಸಂಜೀವ ಪೂಜಾರಿಯವರ ಮೊಮ್ಮಗಳು ನಾರಾಯಣ ಪೂಜಾರಿ ಹಾಗೂ ಶಶಿಕಲಾ ದಂಪತಿಯ ಮಗಳಾದ ಧನಲಕ್ಷ್ಮೀ ಇವರು ಕಬಡ್ಡಿ ಕ್ರೀಡೆಯಲ್ಲಿ ಭಾರತ ದೇಶದ ಪರವಾಗಿ ಆಡಲು ಆಯ್ಕೆಯಾಗಿದ್ದಾರೆ, ಕರ್ನಾಟಕದ ಪರವಾಗಿ ಧನಲಕ್ಷ್ಮೀ ಒಬ್ಬರೇ ಆಯ್ಕೆಯಾಗಿದ್ದು, ದಕ್ಷಿಣಕನ್ನಡಕ್ಕೆ ಮತ್ತು ನಮ್ಮ ರಾಜ್ಯಕ್ಕೆ ಹೆಮ್ಮೆಯ ಕ್ಷಣವಾಗಿದೆ. ನವೆಂಬರ್ 13ರಂದು ಬಾಂಗ್ಲಾದೇಶ ದಲ್ಲಿ ನಡೆಯಲಿರುವ 12 ರಾಷ್ಟ್ರಗಳ ಮಹಿಳಾ ವಿಶ್ವಕಪ್ ಕಬಡ್ಡಿಯಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಇದುವರೆಗೆ 12 ಬಾರಿ ರಾಜ್ಯವನ್ನು ಪ್ರತಿನಿಧಿಸಿದ್ದರು. ಜೂನಿಯರ್, ಸೀನಿಯರ್, ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಕರ್ನಾಟಕದ ಪರವಾಗಿ ಧನಲಕ್ಷ್ಮೀ ಒಬ್ಬರೇ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…