Featured

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಮಹಿಳಾ ಪ್ರಧಾನಿ (ಇಂದಿರಾ ಗಾಂಧಿ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ರಾಷ್ಟ್ರಪತಿ (ಪ್ರತಿಭಾ ಪಾಟೀಲ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಮುಖ್ಯಮಂತ್ರಿ (ಸುಚೇತಾ ಕೃಪಾಲಿನಿ, 1963 ಉತ್ತರ ಪ್ರದೇಶ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಮಂತ್ರಿ (ರಾಜಕುಮಾರಿ ಅಮೃತ ಕೌರ್, 1947) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ MP (ರಾಧಾಬಾಯಿ ಸುಬಾರಾಯನ್, 1952) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ MLA (ಮುತ್ತುಲಕ್ಷ್ಮೀ ರೆಡ್ಡಿ, 1927) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಪಂಚಾಯತ್ ಅಧ್ಯಕ್ಷೆ ಮಾಡಿದ್ದು ಕಾಂಗ್ರೆಸ್. ಇವೆಲ್ಲವೂ ಕಾಂಗ್ರೆಸ್ ನೀಡಿದ ಅವಕಾಶಗಳೇ. ಇದು ಮಹಿಳಾ ಪರ ನಿಲುವಿನ ಜೀವಂತ ಸಾಕ್ಷಿ. ನಮ್ಮ ಗ್ಯಾರಂಟ ಯೋಜನೆಗಳು ಸಹ ಮಹಿಳಾ ಸಬಲೀಕರಣದ ಪರವಾಗಿಯೇ ಇದೆ ಎಂದು ಹೇಳಿದರು.

ಇದನ್ನೂ ಓದಿ: 

ಇಂದು ಬಿಜೆಪಿ ನಮ್ಮ ಮೇಲೆ ಮಾಡುತ್ತಿರುವ “ಮಹಿಳಾ ವಿರೋಧಿ” ಎಂಬ ಆರೋಪ ಸಂಪೂರ್ಣ ಸುಳ್ಳು ಮತ್ತು ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ. ಇದು ಪೂರ್ವಯೋಜಿತ. ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ವಿಂಗಡಣೆ ವಿಷಯವನ್ನೂ ಜೋಡಿಸಿದ್ದರಿಂದ ಸೋಲಾಯಿತು. ಬಿಜೆಪಿಗೆ ಸೋಲುವುದು ಮೊದಲೇ ಗೊತ್ತಿತ್ತು. ಹಾಗಾಗಿ ಕಾಂಗ್ರೆಸ್ ಮೇಲೆ ಆರೋಪ ಹೊರಿಸಲು ವ್ಯವಸ್ಥಿತಿ ಕುತಂತ್ರ ಮಾಡಿದೆ ಎಂದು ಅವರು ಆರೋಪಿಸಿದರು.

ಕಾಂಗ್ರೆಸ್ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ನಾವು ವಿರೋಧಿಸಿದ್ದು ಅದನ್ನು ಕ್ಷೇತ್ರ ಮರುವಿಂಗಡಣೆ ಮತ್ತು ಜನಗಣತಿ ಜೊತೆ ಕಟ್ಟಿ ಹಾಕಿದ ವಿಧಾನ. ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದಿದ್ದರೆ, ಅದನ್ನು ಈಗಿನ ಲೋಕಸಭಾ ಸ್ಥಾನಗಳಲ್ಲೇ ತಕ್ಷಣ ಜಾರಿಗೆ ತರಬಹುದಿತ್ತು. 2023ರಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಲೋಕಸಭೆಯಲ್ಲಿ ಪಾಸ್ ಆದಾಗ ಪ್ರಧಾನಿ ಮತ್ತು ಗೃಹ ಸಚಿವರು ಇದೊಂದು ಐತಿಹಾಸಿಕ ಬಿಲ್ ಎಂದು ಹೇಳಿ ಜಾರಿಗೊಳಿಸದಿರುವುದೇಕೆ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಉದ್ದೇಶಪೂರ್ವಕವಾಗಿ ಜನಗಣತಿ ಮತ್ತು ಕ್ಷೇತ್ರ ವಿಂಗಡಣೆ ಎಂಬ ಷರತ್ತುಗಳನ್ನು ಸೇರಿಸಿ ಅದನ್ನು ವಿಳಂಬಗೊಳಿಸಿದೆ ಎಂದು ಹೇಳಿದರು.

ಇದನ್ನೂ ಓದಿ: 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

6 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

7 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

7 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago