ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಮಹಿಳಾ ಪ್ರಧಾನಿ (ಇಂದಿರಾ ಗಾಂಧಿ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ರಾಷ್ಟ್ರಪತಿ (ಪ್ರತಿಭಾ ಪಾಟೀಲ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಮುಖ್ಯಮಂತ್ರಿ (ಸುಚೇತಾ ಕೃಪಾಲಿನಿ, 1963 ಉತ್ತರ ಪ್ರದೇಶ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಮಂತ್ರಿ (ರಾಜಕುಮಾರಿ ಅಮೃತ ಕೌರ್, 1947) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ MP (ರಾಧಾಬಾಯಿ ಸುಬಾರಾಯನ್, 1952) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ MLA (ಮುತ್ತುಲಕ್ಷ್ಮೀ ರೆಡ್ಡಿ, 1927) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಪಂಚಾಯತ್ ಅಧ್ಯಕ್ಷೆ ಮಾಡಿದ್ದು ಕಾಂಗ್ರೆಸ್. ಇವೆಲ್ಲವೂ ಕಾಂಗ್ರೆಸ್ ನೀಡಿದ ಅವಕಾಶಗಳೇ. ಇದು ಮಹಿಳಾ ಪರ ನಿಲುವಿನ ಜೀವಂತ ಸಾಕ್ಷಿ. ನಮ್ಮ ಗ್ಯಾರಂಟ ಯೋಜನೆಗಳು ಸಹ ಮಹಿಳಾ ಸಬಲೀಕರಣದ ಪರವಾಗಿಯೇ ಇದೆ ಎಂದು ಹೇಳಿದರು.
ಇದನ್ನೂ ಓದಿ:
ಇಂದು ಬಿಜೆಪಿ ನಮ್ಮ ಮೇಲೆ ಮಾಡುತ್ತಿರುವ “ಮಹಿಳಾ ವಿರೋಧಿ” ಎಂಬ ಆರೋಪ ಸಂಪೂರ್ಣ ಸುಳ್ಳು ಮತ್ತು ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ. ಇದು ಪೂರ್ವಯೋಜಿತ. ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ವಿಂಗಡಣೆ ವಿಷಯವನ್ನೂ ಜೋಡಿಸಿದ್ದರಿಂದ ಸೋಲಾಯಿತು. ಬಿಜೆಪಿಗೆ ಸೋಲುವುದು ಮೊದಲೇ ಗೊತ್ತಿತ್ತು. ಹಾಗಾಗಿ ಕಾಂಗ್ರೆಸ್ ಮೇಲೆ ಆರೋಪ ಹೊರಿಸಲು ವ್ಯವಸ್ಥಿತಿ ಕುತಂತ್ರ ಮಾಡಿದೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ನಾವು ವಿರೋಧಿಸಿದ್ದು ಅದನ್ನು ಕ್ಷೇತ್ರ ಮರುವಿಂಗಡಣೆ ಮತ್ತು ಜನಗಣತಿ ಜೊತೆ ಕಟ್ಟಿ ಹಾಕಿದ ವಿಧಾನ. ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದಿದ್ದರೆ, ಅದನ್ನು ಈಗಿನ ಲೋಕಸಭಾ ಸ್ಥಾನಗಳಲ್ಲೇ ತಕ್ಷಣ ಜಾರಿಗೆ ತರಬಹುದಿತ್ತು. 2023ರಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಲೋಕಸಭೆಯಲ್ಲಿ ಪಾಸ್ ಆದಾಗ ಪ್ರಧಾನಿ ಮತ್ತು ಗೃಹ ಸಚಿವರು ಇದೊಂದು ಐತಿಹಾಸಿಕ ಬಿಲ್ ಎಂದು ಹೇಳಿ ಜಾರಿಗೊಳಿಸದಿರುವುದೇಕೆ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಉದ್ದೇಶಪೂರ್ವಕವಾಗಿ ಜನಗಣತಿ ಮತ್ತು ಕ್ಷೇತ್ರ ವಿಂಗಡಣೆ ಎಂಬ ಷರತ್ತುಗಳನ್ನು ಸೇರಿಸಿ ಅದನ್ನು ವಿಳಂಬಗೊಳಿಸಿದೆ ಎಂದು ಹೇಳಿದರು.
ಇದನ್ನೂ ಓದಿ:
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…