ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಮಹಿಳಾ ಪ್ರಧಾನಿ (ಇಂದಿರಾ ಗಾಂಧಿ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ರಾಷ್ಟ್ರಪತಿ (ಪ್ರತಿಭಾ ಪಾಟೀಲ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಮುಖ್ಯಮಂತ್ರಿ (ಸುಚೇತಾ ಕೃಪಾಲಿನಿ, 1963 ಉತ್ತರ ಪ್ರದೇಶ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಮಂತ್ರಿ (ರಾಜಕುಮಾರಿ ಅಮೃತ ಕೌರ್, 1947) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ MP (ರಾಧಾಬಾಯಿ ಸುಬಾರಾಯನ್, 1952) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ MLA (ಮುತ್ತುಲಕ್ಷ್ಮೀ ರೆಡ್ಡಿ, 1927) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಪಂಚಾಯತ್ ಅಧ್ಯಕ್ಷೆ ಮಾಡಿದ್ದು ಕಾಂಗ್ರೆಸ್. ಇವೆಲ್ಲವೂ ಕಾಂಗ್ರೆಸ್ ನೀಡಿದ ಅವಕಾಶಗಳೇ. ಇದು ಮಹಿಳಾ ಪರ ನಿಲುವಿನ ಜೀವಂತ ಸಾಕ್ಷಿ. ನಮ್ಮ ಗ್ಯಾರಂಟ ಯೋಜನೆಗಳು ಸಹ ಮಹಿಳಾ ಸಬಲೀಕರಣದ ಪರವಾಗಿಯೇ ಇದೆ ಎಂದು ಹೇಳಿದರು.
ಇದನ್ನೂ ಓದಿ:
ಇಂದು ಬಿಜೆಪಿ ನಮ್ಮ ಮೇಲೆ ಮಾಡುತ್ತಿರುವ “ಮಹಿಳಾ ವಿರೋಧಿ” ಎಂಬ ಆರೋಪ ಸಂಪೂರ್ಣ ಸುಳ್ಳು ಮತ್ತು ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ. ಇದು ಪೂರ್ವಯೋಜಿತ. ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ವಿಂಗಡಣೆ ವಿಷಯವನ್ನೂ ಜೋಡಿಸಿದ್ದರಿಂದ ಸೋಲಾಯಿತು. ಬಿಜೆಪಿಗೆ ಸೋಲುವುದು ಮೊದಲೇ ಗೊತ್ತಿತ್ತು. ಹಾಗಾಗಿ ಕಾಂಗ್ರೆಸ್ ಮೇಲೆ ಆರೋಪ ಹೊರಿಸಲು ವ್ಯವಸ್ಥಿತಿ ಕುತಂತ್ರ ಮಾಡಿದೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ನಾವು ವಿರೋಧಿಸಿದ್ದು ಅದನ್ನು ಕ್ಷೇತ್ರ ಮರುವಿಂಗಡಣೆ ಮತ್ತು ಜನಗಣತಿ ಜೊತೆ ಕಟ್ಟಿ ಹಾಕಿದ ವಿಧಾನ. ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದಿದ್ದರೆ, ಅದನ್ನು ಈಗಿನ ಲೋಕಸಭಾ ಸ್ಥಾನಗಳಲ್ಲೇ ತಕ್ಷಣ ಜಾರಿಗೆ ತರಬಹುದಿತ್ತು. 2023ರಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಲೋಕಸಭೆಯಲ್ಲಿ ಪಾಸ್ ಆದಾಗ ಪ್ರಧಾನಿ ಮತ್ತು ಗೃಹ ಸಚಿವರು ಇದೊಂದು ಐತಿಹಾಸಿಕ ಬಿಲ್ ಎಂದು ಹೇಳಿ ಜಾರಿಗೊಳಿಸದಿರುವುದೇಕೆ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಉದ್ದೇಶಪೂರ್ವಕವಾಗಿ ಜನಗಣತಿ ಮತ್ತು ಕ್ಷೇತ್ರ ವಿಂಗಡಣೆ ಎಂಬ ಷರತ್ತುಗಳನ್ನು ಸೇರಿಸಿ ಅದನ್ನು ವಿಳಂಬಗೊಳಿಸಿದೆ ಎಂದು ಹೇಳಿದರು.
ಇದನ್ನೂ ಓದಿ:
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಎಂಜಿನಿಯರ್ ಮೇಲೆ ಕೆಸರು ಸುರಿದ ಪ್ರಕರಣ:ಮಹಾರಾಷ್ಟ್ರ ಸಚಿವ ನಿತೇಶ್ ನಾರಾಯಣ ರಾಣೆಗೆ 1 ತಿಂಗಳು ಜೈಲು ಶಿಕ್ಷೆ ಮುಂಬೈ: ಮಹಾರಾಷ್ಟ್ರ…