Featured

ಮಹಿಳಾ ಸುರಕ್ಷತೆ ಕುರಿತು ಬಿಜೆಪಿಯಿಂದ ಪಾಠ ಹೇಳಿಕೊಳ್ಳುವಷ್ಟು ಸ್ಥಿತಿ ಕಾಂಗ್ರೆಸ್ ಸರಕಾರಕ್ಕೆ ಬಂದಿಲ್ಲ:  ವೆರೋನಿಕಾ ಕರ್ನೇಲಿಯೋ – Vishwanews24

ಕಾಂಗ್ರೆಸ್ ಸರಕಾರಕ್ಕೆ ಮಹಿಳಾ ಸುರಕ್ಷತೆ ಕುರಿತು ಬಿಜೆಪಿಯಿಂದ ಪಾಠ ಹೇಳಿಕೊಳ್ಳುವಷ್ಟು ಸ್ಥಿತಿ ಬಂದಿಲ್ಲ:  ವೆರೋನಿಕಾ ಕರ್ನೇಲಿಯೋ

ಉಡುಪಿ: ಮಹಿಳೆಯರ ಸುರಕ್ಷತೆಯ ಕುರಿತು ಬಿಜೆಪಿಯಿಂದ ಸಂಸ್ಕೃತಿಯ ಪಾಠವನ್ನು ಹೇಳಿಕೊಳ್ಳುವಷ್ಟು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸ್ಥಿತಿ ಬಂದಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರಾದ ವೆರೋನಿಕಾ ಕರ್ನೆಲಿಯೊ ಹೇಳಿದ್ದಾರೆ.

ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್ ಸರಕಾರ ದುರಾಡಳಿತ ನಡೆಸುತ್ತಿದೆ. ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ಮಹಿಳಾ ವಿರೋಧಿ ಧೋರಣೆಗಳು ಕಾಣಿಸುತ್ತವೆ. ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ ಜನತೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿರುವ ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಮ್. ಸುವರ್ಣ ಅವರು ಒಮ್ಮೆ ತಮ್ಮದೇ ಬಿಜೆಪಿ ಪಕ್ಷದ ನಾಯಕರು ಮಹಿಳೆಯರನ್ನು ಯಾವ ರೀತಿಯಲ್ಲಿ ನಡೆಸಿಕೊಂಡಿದ್ದಾರೆ ಎನ್ನುವುದನ್ನು ಅವಲೋಕನ ಮಾಡಿಕೊಳ್ಳುವುದು ಒಳಿತು.

 

ಮಹಿಳೆಯನ್ನು ಮಾತೆ ತಾಯಿ ಎಂದು ಬಾಯಿ ತುಂಬಾ ಹೊಗಳಿ ಅವರ ಮೇಲೆ ದೌರ್ಜನ್ಯವೆಸಗಿದ ಬಿಜೆಪಿ ಪಕ್ಷದ ನಾಯಕರುಗಳಾದ ರೇಣುಕಾಚಾರ್ಯ, ಹಾಲಪ್ಪ, ರಾಮದಾಸ್ ಅವರ ವರ್ತನೆಯನ್ನು ಈ ರಾಜ್ಯದ ಜನರು ಮರೆತಿಲ್ಲ. ಬೇಟಿ ಬಚಾವೊ ಬೇಟಿ ಪಡವೊ ಎಂದು ಹೇಳುವುದರ ಮೂಲಕ ಮಹಿಳೆಯ ಉದ್ದಾರ ಮಾಡುವುದಾಗಿ ಹೇಳಿ ಮೋಸ ಮಾಡಿರುವುದು ಅಲ್ಲದೆ ಆಕೆಯ ಅಭಿವೃದ್ಧಿಗೆ ಯಾವ ಯೋಜನೆಯನ್ನು ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ನೀಡಿದೆ ಎನ್ನುವುದು ರಾಜ್ಯದ ಪ್ರತಿಯೊಂದು ಮಹಿಳೆಯರೂ ಕೂಡ ಅರಿತಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಆದೇಶದಲ್ಲಿ ಹೇಳಿರುವಂತೆ ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. ಆದರೆ ಬಿಜೆಪಿಗರು ಸುಳ್ಳನ್ನು ಸತ್ಯ ಮಾಡುವುದರಲ್ಲಿ ನಿಸ್ಸೀಮರು ಎನ್ನುವುದು ಜಗತ್ತಿಗೆ ತಿಳಿದಿರುವ ಸಂಗತಿಯಾಗಿದೆ. ಮಹಿಳೆಯರಿಗೆ ಯಾವ ರೀತಿ ಗೌರವ ನೀಡಬೇಕು ಎನ್ನುವುದು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಅರಿತಿದ್ದು ಆಕೆಯ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಪಕ್ಷ ನಮ್ಮದು.

ರಾಜಕೀಯದಲ್ಲಿ 50% ಮಹಿಳಾ ಮೀಸಲಾತಿಯನ್ನು ನೀಡಲು ಸಂಸತ್ತಿನಲ್ಲಿ ವಿಧೇಯಕವನ್ನು ಪರಿಚಯಿಸಿದ್ದು ಹಿಂದಿನ ಯುಪಿಎ ಸರಕಾರ ಎನ್ನುವುದು ಬಿಜೆಪಿಗರು ಮೊದಲು ಅರಿಯಲಿ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು, ಮನೆಯ ಯಜಮಾನಿಗೆ 2000 ರೂಪಾಯಿ ಪ್ರತಿತಿಂಗಳೂ ನೀಡುವುದರ ಮೂಲಕ ಆರ್ಥಿಕ ಭದ್ರತೆಯನ್ನು ನೀಡಿರುವುದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ. ಕೇವಲ ಬಾಯಿ ಮಾತಿನಲ್ಲಿ ಮಹಿಳೆಯರ ರಕ್ಷಣ ಎಂದು ಪುಂಗಿ ಉದದೇ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಅತೀ ಹೆಚ್ಚಿನ ಸೀಟು ನೀಡುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹೇಳಿಕೊಳ್ಳುವಂತಹ ಯಾವುದೇ ವಿಚಾರಗಳಿಲ್ಲದೆ ಒದ್ದಾಡುತ್ತಿದ್ದು ಇಂತಹ ಬಾಲಿಶ ಹೇಳಿಕೆಗಳನ್ನು ನೀಡಿಕೊಂಡು ಕಾಲ ಹರಣ ಮಾಡುತ್ತಿದೆ.

ಮಹಿಳೆಯರ ಬಗ್ಗೆ ಕಾಳಜಿ ಇರುವ ಇವರು ಕಳೆದ 10 ವರ್ಷಗಳಿಂದ ಸಂಸದರಾಗಿ ಪ್ರತಿನಿಧಿಸುತ್ತಿದ್ದ ಶೋಭಾ ಕರಂದ್ಲಾಜೆ ವಿರುದ್ದ ಅವರದ್ದೇ ಪಕ್ಷದವರು ಗೋ ಬ್ಯಾಕ್ ಎಂದಾಗ ರಸ್ತೆಗಿಳಿದು ಹೋರಾಟವನ್ನು ಮಾಡುವ ಧೈರ್ಯವನ್ನು ಯಾಕೆ ಬಿಜೆಪಿಯ ಮಹಿಳಾ ಸದಸ್ಯರು ತೋರಿಸಿಲ್ಲ. ಇದು 10 ವರ್ಷಗಳಿಂದ ಕ್ಷೇತ್ರದ ಪ್ರಾಮಾಣಿಕ ಸೇವೆ ಮಾಡಿದ್ದೇನೆ ಎಂದು ಹೇಳಿಕೊಂಡ ಮಹಿಳಾ ಸಂಸದೆಗೆ ಮಾಡಿದ ಅವಮಾನವಲ್ಲವೇ? ಇದು ಕೂಡ ಮಹಿಳಾ ವಿರೋಧಿ ವರ್ತನೆಯಲ್ಲವೇ?. ಮೊದಲು ತಮ್ಮ ಮನೆಯ ಬಟ್ಟಲಿನಲ್ಲಿ ಇರುವ ಹುಳುಕನ್ನು ಎತ್ತಿ ಬಳಿಕ ಬೇರೆಯವರ ಮನೆಯ ಬಟ್ಟಲಿನಲ್ಲಿ ಇಣುಕಿ ನೋಡಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago