ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮೀನು ಹೊರುವ ಮಹಿಳೆಗೆ ಹೊಡೆದ ಘಟನೆ ಉದ್ದೇಶ ಪೂರ್ವಕವಾಗಿರದೆ ಕ್ಷಣಿಕ ಸಿಟ್ಟಿನಿಂದ ಘಟಿಸಿದ್ದು ಎಂದು ಮಲ್ಪೆ ಮೀನುಗಾರರ ಸಂಘ ಸ್ಪಷ್ಟಪಡಿಸಿದೆ.
ನಾವು ಈ ಘಟನೆಯನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದಿರುವ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಪ್ರತಿ ದಿನ ಸಾವಿರಾರು ಕುಟುಂಬಗಳು ಜಾತಿ, ಮತ, ಪಂಗಡ, ಭೇದವಿಲ್ಲದೆ ಹೊರರಾಜ್ಯ, ಜಿಲ್ಲೆಯ ಜನರು ಮೀನುಗಾರಿಕೆಯಲ್ಲಿ ದುಡಿದು ಜೀವನ ಸಾಗಿಸುತ್ತಿವೆ. ಆದರೆ ಸ್ಥಳೀಯ ನಮ್ಮ ಮೀನುಗಾರರ ಸಂಘಟನೆಗಳು ಸೌಹಾರ್ದಯುತವಾಗಿ ನ್ಯಾಯ ಕೊಡುವಲ್ಲಿ ಬದ್ಧ ಎಂದು ತಿಳಿಸಿದ್ದಾರೆ.
ಘಟನೆ ಗಮನಕ್ಕೆ ಬಂದ ಕೂಡಲೇ ಮಲ್ಪೆಯ ಠಾಣಾಧಿಕಾರಿಯ ಗಮನಕ್ಕೆ ತಂದು ಎರಡೂ ಕಡೆಯವರನ್ನು ಮೀನುಗಾರ ಮುಖಂಡರ ಸಮಕ್ಷಮದಲ್ಲಿ ವಿಚಾರಿಸಲಾಗಿದ್ದು ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿರುತ್ತಾರೆ. ಈ ಬಗ್ಗೆ ಠಾಣಾಧಿಕಾರಿಯವರು 2 ಕಡೆಯವರಿಂದ ತಪ್ಪೊಪ್ಪಿಗೆ ಹಿಂಬರಹವನ್ನು ಬರೆಸಿಕೊಂಡು ಇತ್ಯರ್ಥಗೊಳಿಸಿದ್ದರು ಎಂದಿದ್ದಾರೆ.
ಸಹಿ ಹಾಕಲೆಂದು ಕರೆಸಿ ಬಂಧಿಸಿದ್ದರು
ದಿನಾಲೂ ಸಾವಿರಾರು ಜನರು ಸೇರುವ ಬಂದರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆದಲ್ಲಿ ಅದನ್ನು ಇಲ್ಲಿನ ಮೀನುಗಾರಿಕೆ ಸಂಘಟನೆಗಳು ಚರ್ಚಿಸಿ ಪರಿಹರಿಸಿಕೊಳ್ಳುತ್ತಿದ್ದವು. ಈ ಘಟನೆಗೆ ಸಂಬಂಧಿಸಿ ಬೋಟಿನ ಮಾಲಕರನ್ನು ರಾಜಿ ಪಂಚಾಯಿತಿಗೆ ಸಹಿ ಹಾಕಲೆಂದು ಕರೆಸಿ ಸತ್ಯಾಸತ್ಯತೆಯನ್ನು ಅರಿಯದೇ ಬಂಧಿಸಲಾಗಿದೆ. ಈ ಬಗ್ಗೆ ವಲಯಾಧಿಕಾರಿಯನ್ನು ವಿಚಾರಿಸಿದಾಗ ಠಾಣಾಧಿಕಾರಿಯವರ ರಾಜಿ ಪಂಚಾಯಿತಿಗೆ ಮಾನ್ಯತೆ ನೀಡದೇ ನಾಲ್ವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಘಟನೆಯ ಒಂದು ಮುಖವನ್ನು ಮಾತ್ರ ತೋರಿಸಿ ಮೀನುಗಾರರ ಮೇಲೆ ಕಳಂಕ ಬರುವಂತೆ ಮಾಡಿದ್ದಾರೆ. ಯಾರದೋ ಒತ್ತಡಕ್ಕೆ ಒಳಗಾಗಿ ಬಡ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಆಪಾದಿಸಿದ್ದಾರೆ.
ನ್ಯಾಯ ಸಿಕ್ಕಿಲ್ಲ
ಹಲವು ಸಮಯದಿಂದ ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಸಲಕರಣೆಗಳಾದ ಫ್ಯಾನ್, ಬ್ಯಾಟರಿ, ಜಿಪಿಎಸ್., ವಯರ್ಲೆಸ್, ಫಿಶ್ಫೈಂಡರ್, ಬಲೆ ಸಾಮಗ್ರಿಗಳು ಮತ್ತು ಮೀನುಗಳನ್ನು ಕಳವು ಮಾಡಿದ್ದರ ಬಗ್ಗೆ ಹಲವು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ನ್ಯಾಯ ಸಿಕ್ಕಿಲ್ಲ. ಕೂಡಲೇ ಮೀನುಗಾರಿಕೆ ಮತ್ತು ಬಂದರು ಇಲಾಖೆ, ಬಂದರು ನಿರ್ವಹಣೆಯ ಹೊಣೆ ವಹಿಸಿಕೊಂಡವರು ಷರತ್ತು ಪ್ರಕಾರ 30 ಕಾವಲು ಸಿಬಂದಿಯನ್ನು ಹಾಗೂ ಎಲ್ಲೆಡೆ ಸಿ.ಸಿ. ಕೆಮರಾ ಅಳವಡಿಸಬೇಕೆಂದು ಆಗ್ರಹಿಸಿದ್ದಾರೆ. ಎಲ್ಲ ಅಧಿಕಾರಿಗಳಿಗೆ ಮತ್ತು ಕರಾವಳಿ ಪೇ ಪಾರ್ಕಿಂಗ್ನವರಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.
ಮಾ. 22ರಂದು ಪ್ರತಿಭಟನೆ
ಮೀನುಗಾರರ ಮೇಲೆ ಕಳಂಕ ಬರುವಂತೆ ಬಿಂಬಿಸಿರುವ, ಘಟನೆಯ ಸತ್ಯಾಸತ್ಯತೆಯನ್ನು ಬಯಲಿಗೆಳೆಯುವ ಬಗ್ಗೆ ಮಾ. 22ರಂದು ಬೆಳಗ್ಗೆ 9 ಕ್ಕೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನುಗಾರರು ಸ್ವ ಇಚ್ಛೆಯಿಂದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆಯನ್ನು ನಡೆಸುವರು. ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಂಘದವರು ಮನವಿ ಸಲ್ಲಿಸುವರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…