ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯ ಪ್ರವೇಶ ತೀರ್ಪನ್ನು ಮರು ಪರಿಶೀಲಿಸುವಂತೆ ಸುರ್ಪೀಂ ಕೋರ್ಟ್ಗೆ ಮನವಿಯನ್ನೂ ಸಲ್ಲಿಸಿದ್ದಾರೆ. ಈ ಬೆಳವಣಿಗೆಗಳ ಮಧ್ಯೆ ಮಹಿಳೆಯರಿಗೆಂದೇ ಪ್ರತ್ಯೇಕ ದಿನ ನಿಗದಿ ಮಾಡಬಹುದೆಂದು ಕೇರಳ ಸರ್ಕಾರ ಹೇಳಿದೆ.
ಶಬರಿಮಲೆ ದೇವಾಲಯ ಪ್ರವೇಶಿಸಲು ಮಹಿಳೆಯರಿಗೆಂದೇ ಪ್ರತ್ಯೇಕವಾಗಿ ಎರಡು ದಿನಗಳನ್ನು ನಿಗದಿಪಡಿಸಬಹುದು ಎಂದು ಕೇರಳ ಸರ್ಕಾರವು ಶುಕ್ರವಾರ ಹೈಕೋರ್ಟ್ಗೆ ತನ್ನ ಅಭಿಪ್ರಾಯ ತಿಳಿಸಿದೆ.
‘ಮಹಿಳೆಯರು ದೇಗುಲ ಪ್ರವೇಶಿಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ದೇವಾಲಯ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ಕೆಲವು ರಾಜಕೀಯ ಸಂಘಟನೆಗಳು ಬೆದರಿಕೆ ಹಾಕಿವೆ. ಹೀಗಾಗಿ ನಮಗೆ ಭದ್ರತೆ ಕೊಡಿ’ ಎಂದು ನಾಲ್ವರು ಮಹಿಳೆಯರು ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರದಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಕೇಳಿತ್ತು.
ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ಮಹಿಳೆಯರಿಗೇ ಪ್ರತ್ಯೇಕ ದಿನವನ್ನು ಮೀಸಲಿರಿಸಿದರೆ ಸಮಸ್ಯೆ ಬಗೆಹರಿಯಬಹುದು. ಈ ಬಗ್ಗೆ ತಿರುವಾಂಕೂರು ದೇವಸ್ವ ಮಂಡಳಿಯ ಜತೆ ಮಾತನಾಡುತ್ತೇವೆ ಎಂದು ಸರ್ಕಾರ ಕೋರ್ಟ್ಗೆ ತಿಳಿಸಿದೆ.
ವಿಚಾರಣೆ ವೇಳೆ ರಾಜ್ಯ ಸರ್ಕಾರ, ಮಹಿಳೆಯರು ಮಾಡಿದ ಸಲಹೆಯ ಮೇರೆಗೆ ತೀರ್ಥಯಾತ್ರೆ ಕಾಲದಲ್ಲಿ ದೇವಾಲಯದಲ್ಲಿ ಪ್ರಾರ್ಥನೆಗಳನ್ನು ಸಲ್ಲಿಸಲು ಎಲ್ಲಾ ವಯಸ್ಸಿನ ಮಹಿಳೆಯರಿಗೆ ಎರಡು ದಿನಗಳನ್ನು ಪ್ರತ್ಯೇಕವಾಗಿ ಮೀಸಲಿರಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿತು.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…