Featured

ಮಹಿಳೆಯರು ಕಾಲ್ಗೆಜ್ಜೆ ಧರಿಸುವುದರಿಂದ ಆಗುವ ಆರೋಗ್ಯಕರ ಲಾಭಗಳು -Vishwanews24

ಮಹಿಳೆಯರು ಕಾಲ್ಗೆಜ್ಜೆ ಧರಿಸುವುದರಿಂದ ಆಗುವ ಆರೋಗ್ಯಕರ ಲಾಭಗಳು -Vishwanews24

ಮಹಿಳೆಯರ ಹದಿನಾರು ಶೃಂಗಾರ ಸಾಧನಗಳಲ್ಲಿ ಕಾಲ್ಗೆಜ್ಜೆ ಕೂಡ ಒಂದು. ಮಹಿಳೆಯರ ಸೌಂದರ್ಯ ಇಮ್ಮುಡಿಗೊಳಿಸಲು ಕಾಲ್ಗೆಜ್ಜೆ ಸಹ ಪ್ರಮುಖ ಪಾತ್ರ ವಹಿಸುತ್ತದೆ. ಕಾಲ್ಗೆಜ್ಜೆ ನಾರಿಯ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸವಂಥದ್ದು. ಪುಟ್ಟ ಹುಡಗಿಯರಿಂದ ಹಿಡಿದು ದೊಡ್ಡವರವರಿಗೂ ಕಾಲ್ಗೆಜ್ಜೆ ಎಲ್ಲರಿಗೂ ಇಷ್ಟವಾಗುತ್ತದೆ. ತನ್ನದೇ ಆದ ಆಕರ್ಷಕ ವಿನ್ಯಾಸದಿಂದ ಮಹಿಳೆಯರನ್ನ ತನ್ನತ್ತ ಆಕರ್ಷಿಸುತ್ತಿವೆ.

ಗೆಜ್ಜೆಯನ್ನು ಕಾಲಿಗೆ ಧರಿಸುವುದರಿಂದ ದೈವಿಕ ಶಕ್ತಿಗಳು ಆಕರ್ಷಿತವಾಗುತ್ತವೆ ಎಂಬ ನಂಬಿಕೆ ಕೂಡ ಇದೆ. ಹಾಗೂ ಮನೆಯೊಳಗೆ ಪ್ರವೇಶವಾಗುವ ಎಲ್ಲ ನಕಾರಾತ್ಮಕ ಶಕ್ತಿಗಳಿಗೆ ಲಗಾಮು ಹಾಕುವ ಶಕ್ತಿಯನ್ನು ಈ ಕಾಲ್ಗೆಜ್ಜೆ ಹೊಂದಿದೆ. ಗೆಜ್ಜೆಯ ಶಬ್ಧವು ವಾತಾರಣವನ್ನು ಪವಿತ್ರವಾಗಿ, ಶುದ್ಧವಾಗಿ ಇರಿಸುತ್ತದೆ. ಮತ್ತು ಗೆಜ್ಜೆಯ ಶಬ್ಧವು ಮನೆಯಲ್ಲಿ ಕಂಪಿಸುವುದರಿಂದ ಮನೆಯ ವಾತಾವರಣವು ಒಳ್ಳೆಯದಾಗಿರುತ್ತದೆ. ಕಾಲ್ಗೆಜ್ಜೆ ಎಲ್ಲ ಸಂಧರ್ಭದಲ್ಲಿ ಹೊಂದುವುದಿಲ್ಲ. ಕೇವಲ ಸಾಂಪ್ರದಾಯಿಕ ಉಡುಗೆಗಳಲ್ಲಿ ಮಾತ್ರ ತನ್ನ ಒಲವನ್ನು ತೋರಿಸುತ್ತದೆ. ಕಾಲ್ಗೆಜ್ಜೆ ಧರಿಸುವುದರಿಂದ ಆಗುವ ಆರೋಗ್ಯಕರ ಲಾಭಗಳು ಯಾವುದೆಂದು ಎಳೆ ಎಳೆಯಾಗಿ ಈ ಲೇಖನದಲ್ಲಿ ತಿಳಿಸಿ ಕೊಡುತ್ತೇವೆ. ಸ್ವಲ್ಪ ಸಮಯವಿದ್ದರೆ ಈ ಮಾಹಿತಿಯನ್ನು ಕೊನೆವರೆಗೂ ಓದಿ. ಕಾಲ್ಗೆಜ್ಜೆಯನ್ನು ಫ್ಯಾಶನ್ ಗಾಗಿ ಮಾತ್ರವಲ್ಲ ಇದರಿಂದ ಹಲವಾರು ವೈಜ್ಞಾನಿಕ ದೃಷ್ಟಿಯಿಂದ ಹಲವಾರು ಪ್ರಯೋಜನಗಳಿವೆ. ಕಾಲ್ಗೆಜ್ಜೆ ನಮ್ಮ ದೇಹವನ್ನು ಆರೋಗ್ಯವಾಗಿ ಇಡುವಲ್ಲಿ ತುಂಬಾ ಸಹಾಯಕಾರಿಯಾಗಿದೆ.

ಕಾಲ್ಗೆಜ್ಜೆ,  ಧರಿಸುವುದರಿಂದ ಆರೋಗ್ಯಕರ ಪ್ರಯೋಜನಗಳು ;

ಇದು ವೈಜ್ಞಾನಿಕವಾಗಿ ಮತ್ತು ಆರೋಗ್ಯಕರವಾಗಿಯು ಲಾಭದಾಯಕ ಎಂದು ಹೇಳಿದರೆ ತಪ್ಪಾಗಲಾರದು.

ಕಾಲ್ಗೆಜ್ಜೆ ನಮ್ಮ ದೇಹವನ್ನು ಆರೋಗ್ಯವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಕಾಲ್ಗೆಜ್ಜೆ ಸಪ್ಪಳಿನಿಂದ ಮನೆಯಲ್ಲಿ ಸಕಾರಾತ್ಮಕತೆ ಮತ್ತು ಪರಿಶುದ್ಧತೆ ಆವರಿಸಿಕೊಳ್ಳದೆ ಮನೆಯಲ್ಲಿ ಕಂಪನವನ್ನು ಹೊರಹೊಮ್ಮುವಂತೆ ಮಾಡುತ್ತದೆ. ಧನಾತ್ಮಕ ಕಂಪನಗಳು ಹೊರಹೊಮ್ಮುತ್ತದೆ. ಕಾಲ್ಗೆಜ್ಜೆ ಕಾಲಿನ ಬಲವನ್ನು ಹೆಚ್ಚಿಸುತ್ತದೆ.

ಬಂಗಾರದಿಂದ ಅಥವಾ ಲೋಹದಿಂದ ಮಾಡಿರುವ ಗೆಜ್ಜೆಗಳು ಆರೋಗ್ಯಕ್ಕೆ ಒಳ್ಳೆಯದು. ಅನೇಕ ಕಾಯಿಲೆಗಳನ್ನು ತಡೆಗಟ್ಟಬಹುದಾದ ಶಕ್ತಿಯನ್ನು ಈ ಲೋಹವು ಒಳಗೊಂಡಿದೆ.

ಆಯುರ್ವೇದದಲ್ಲಿ ಕೆಲವೊಂದು ಔಷಧವನ್ನು ಲೋಹದ ಪುಡಿಯಿಂದ ತಯಾರಿಸುತ್ತಾರೆ. ಹಾಗಾಗಿ ಲೋಹದ ಕಾಲ್ಗೆಜ್ಜೆ ಧರಿಸುವುದು ಉತ್ತಮ.

ಬೆಳ್ಳಿಯ ಕಾಲ್ಗೆಜ್ಜೆ ಧರಿಸುವುದರಿಂದ ಕಾಲು ನೋವು ಕಡಿಮೆಯಾಗುತ್ತದೆ. ಹಾಗೂ ಶರೀರದ ದೌರ್ಬಲ್ಯವನ್ನು ಕಡಿಮೆ ಮಾಡುವಲ್ಲಿ ಇದು ಮನೆಮದ್ದು ಆಗಿದೆ.

ಮಹಿಳೆಯರು ಬೆಳ್ಳಿಯ ಕಾಲ್ಗೆಜ್ಜೆ ಧರಿಸುವುದರಿಂದ ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ಆಗಲು ಸಹಾಯ ಮಾಡುತ್ತದೆ. ಇದರಿಂದ ಕಾಲುಗಳಲ್ಲಿ ಉಂಟಾಗುವ ಉರಿಯೂತವನ್ನು ಕೂಡ ಕಡಿಮೆ ಮಾಡುತ್ತದೆ.

ಮತ್ತು ದೇಹದಲ್ಲಿ ಇಮ್ಯುಣಿಟಿ ಪವರ್ ಹೆಚ್ಚಿಸುತ್ತದೆ. ಮುಟ್ಟಿನ ಸಮಸ್ಯೆ, ಹಾರ್ಮೋನ್ ಗಳ ಏರುಪೇರು, ಬಂಜೆತನ ಸಮಸ್ಯೆ ಎಲ್ಲ ಸಮಸ್ಯೆಗಳನ್ನು ಕಾಲ್ಗೆಜ್ಜೆ ಧರಿಸುವುದರಿಂದ ಹೋಗಲಾಡಿಸಬಹುದು.

ಬೆಳ್ಳಿಯ ಕಾಲ್ಗೆಜ್ಜೆ ಧರಿಸುವುದರಿಂದ ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ. ದೇಹವನ್ನು ತಂಪಾಗಿಡುವಲ್ಲಿ ಸಹಕಾರಿಯಾಗಿದೆ.

ಬೆಳ್ಳಿಯ ಕಾಲ್ಗೆಜ್ಜೆ ಧರಿಸುವ ಹೆಣ್ಣು ಮಕ್ಕಳು ಮತ್ತು ವೈವಾಹಿತ ಮಹಿಳೆಯರು ತುಂಬಾ ಆರೋಗ್ಯಕರವಾಗಿರುತ್ತಾರೆ. ಮತ್ತು ಶರೀರವು ಸೊಂಕುಗಟ್ಟದೆ ಅಂದವಾಗಿ ಕಾಣಲು ಈ ಕಾಲ್ಗೆಜ್ಜೆ ಸಹಾಯ ಮಾಡುತ್ತದೆ

ಕಾಲ್ದೆಜ್ಜೆಯಿಂದ ಆರೋಗ್ಯ ಹೆಚ್ಚುತ್ತೆ.

ಮಹಿಳೆಯರು ಕಾಲ್ಗೆಜ್ಜೆ ಧರಿಸುವುದರಿಂದ ಆರೋಗ್ಯ ಹೆಚ್ಚುತ್ತದೆ ಎಂದು ಹಿರಿಯರು ಹೇಳುತ್ತಾರೆ. ಕಾಲ್ಗೆಜ್ಜೆ ಕಾಲಿನ ಬಲ, ಶಕ್ತಿಯನ್ನು ಹೆಚ್ಚಿಸುವುದಲ್ಲದೇ, ಕಾಲು ನೋವು ಕಡಿಮೆಯಾಗುತ್ತದೆ. ದೇಹವನ್ನು ತಂಪಾಗಿಡುತ್ತದೆ. ಶರೀರ ಸುಕ್ಕು ಗಟ್ಟದಂತೆ ನಿಮ್ಮನ್ನು ರಕ್ಷಣೆ ಮಾಡುತ್ತದೆ. ಬೆಳ್ಳಿ ಕಾಲ್ಗೆಜ್ಜೆ ಧರಿಸುವುದರಿಂದ ಕಾಲಿನ ನೋವು ಹಾಗೂ ಊತ ಕಡಿಮೆಯಾಗುತ್ತದೆ. ಶರೀರ ದೌರ್ಬಲ್ಯ ಉಂಟಾದರೆ, ಬೆಳ್ಳಿಯ ಕಾಲ್ಗೆಜ್ಜೆಯನ್ನು ಮಹಿಳೆಯರು ಧರಿಸಿದರೆ ದೇಹದ ರಕ್ತ ಸಂಚಾರ ಸಲೀಸಾಗಲು ಕಾಲ್ಗೆಜ್ಜೆ ಸಹಕಾರಿ.

ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುತ್ತದೆ.

ಕಾಲ್ಗೆಜ್ಜೆ ಧರಿಸುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ಮನೆಯ ಶುದ್ಧತೆಯನ್ನು ಕಾಲ್ಜೆಗ್ಗೆ ಕಾಪಾಡುತ್ತದೆ. ಮನೆಯಲ್ಲಿ ಮಹಿಳೆಯರು ಕಾಲ್ಗೆಜ್ಜೆ ಧರಿಸುವುದರಿಂದ ದೇವತೆಗಳ ಶ್ರೀರಕ್ಷೆ , ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ.

ಪಾದಗಳ ಅಂದ ಹೆಚ್ಚಿಸುವ ಹೊರತಾಗಿ, ಮಹಿಳೆಯರು ಕಾಲುಗಳಿಗೆ ರಕ್ಷಣೆ ಒದಗಿಸುತ್ತದೆ. ಸ್ತ್ರೀರೋಗಗಳಿಗೆ ಸಂಬಂಧಿಸಿದ, ಅಸ್ವಸ್ಥತೆ, ಬಂಜೆತನ ಮತ್ತು ಹಾರ್ಮೋನುಗಳ ಅಸಮತೋಲನ ಮತ್ತು ಹೆರಿಗೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಗುಣಪಡಿಸಬಹುದಾಗಿದೆ.

ಹೆಣ್ಣು ಮಕ್ಕಳು ಕಾಲ್ಗೆಜ್ಜೆ ಧರಿಸುವುದರಿಂದ ಅವರು ನಡೆದಾಡುವಾಗ ಬರುವ ಲಯಬದ್ಧವಾದ ಸದ್ದು ಆ ಧ್ವನಿ ಆ ಗೆಜ್ಜೆಯ ನಾದದಿಂದ ಬರುವ ಶಬ್ದವನ್ನು ಕೇಳಿಸಿಕೊಂಡಾಗ ಸಾಕ್ಷಾತ ಲಕ್ಷ್ಮೀ ದೇವಿಯೇ ಆ ಮನೆಯನ್ನು ಹುಡುಕಿಕೊಂಡು ಬರುತ್ತಾಳೆ ಎಂಬ ನಂಬಿಕೆ ಇದೆ. ಇನ್ನು ಕಾಲಿಗೆ ಬೆಳ್ಳಿ ಕಾಲುಂಗರ ಹಾಗೂ ಗೆಜ್ಜೆ ಧರಿಸುವ ಹೆಣ್ಣುಮಕ್ಕಳು ಸದಾ ಆರೋಗ್ಯವಾಗಿರುತ್ತಾರೆ.

ಶಬ್ದ ಮನೆಯ ನಕಾರಾತ್ಮಕ ಶಕ್ತಿಯನ್ನು ತಡೆಯುತ್ತದೆ. ಅನೇಕ ಕಾಯಿಲೆಗಳನ್ನು ತಡೆಯುವ ಶಕ್ತಿ ಈ ಕಾಲ್ಗೆಜ್ಜೆಯಲ್ಲಿದೆ. ಕಾಲಿನಲ್ಲಿ ಬೆಳ್ಳಿಯ ಕಾಲುಂಗುರ, ಕಾಲ್ಗೆಜ್ಜೆ, ಕೈ ಬಳೆ, ಸೇರಿದಂತೆ ಇನ್ನಿತರ ಆಭರಣಗಳು ಧಾರ್ಮಿಕ ಜತೆಗೆ ವೈಜ್ಞಾನಿಕ ಹಿನ್ನೆಲೆಯಿದೆ. ನಮ್ಮ ಜೀವನದಲ್ಲಿ ಬೆಳ್ಳಿಯ ಆಭರಣಗಳನ್ನು ಉಪಯೋಗಿಸುವುದು ಸಾಕಷ್ಟು ಪ್ರಯೋಜನಗಳನ್ನು ಕಾಣಬಹುದು.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

14 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

15 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

16 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

17 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

17 hours ago