Featured

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಂಗಳೂರಿಗೂ ಬಂತು ರಾಣಿ ಅಬ್ಬಕ್ಕ ಪೊಲೀಸ್ ಪಡೆ -Vishwanews24

ಮಂಗಳೂರು,: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಂಗಳೂರು ನಗರದಲ್ಲೂ ರಾಣಿ ಅಬ್ಬಕ್ಕ ಮಹಿಳಾ ಗಸ್ತು ಪೊಲೀಸ್ ಪಡೆ ಕಾರ್ಯನಿರ್ವಹಿಸಲು ಸಿದ್ಧತೆ ನಡೆಸಿದೆ.

ಬೆಳಗಾವಿ ಪೊಲೀಸ್ ಇಲಾಖೆಯ ಚೆನ್ನಮ್ಮ ಪಡೆ, ಚಿತ್ರದುರ್ಗದ ಓಬವ್ವ ಪಡೆ ಮಾದರಿಯಲ್ಲಿ ನಗರದಲ್ಲೂ ಅಬ್ಬಕ್ಕ ಪಡೆ ಕಾರ್ಯಾಚರಣೆಗಿಳಿಯಲಿದೆ. ಉಡುಪಿಯಲ್ಲಿ ಇತ್ತೀಚೆಗೆ ಅಬ್ಬಕ್ಕ ಪಡೆಗೆ ಚಾಲನೆ ನೀಡಲಾಗಿದೆ. ಎರಡು ವರ್ಷಗಳ ಹಿಂದೆ ಚಂದ್ರಶೇಖರ್ ಪೊಲೀಸ್ ಆಯುಕ್ತರಾಗಿದ್ದ ಸಂದರ್ಭ ಅಬ್ಬಕ್ಕ ಪಡೆ ಸ್ಥಾಪನೆ ಬಗ್ಗೆ ಚಿಂತನೆ ನಡೆಸಲಾಗಿತ್ತು.

ರಾಣಿ ಅಬ್ಬಕ್ಕ ಪಡೆಯಲ್ಲಿರುವ ಮಫ್ತಿ ಮಹಿಳಾ ಪೊಲೀಸರು ಶಾಲಾ-ಕಾಲೇಜು, ಜನದಟ್ಟಣೆ ಪ್ರದೇಶಗಳು, ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ಗಸ್ತು ತಿರುಗಲಿದ್ದಾರೆ. ಮಹಿಳೆಯರನ್ನು ಚುಡಾಯಿಸುವ, ಕೀಟಲೆ ಮಾಡುವ, ಅಶ್ಲೀಲ ಕಮೆಂಟ್, ಅಸಭ್ಯ ವರ್ತನೆ ಮಾಡುವವರನ್ನು ಹಿಡಿದು ಕ್ರಮ ಕೈಗೊಳ್ಳಲಿದ್ದಾರೆ. ವಾಹನದಲ್ಲಿ ಪಿಎಸ್ಸೈ ಸಹಿತ ಮೂವರು ಸಿಬ್ಬಂದಿ ಇರಲಿದ್ದು, ಇದರಲ್ಲಿ ಓರ್ವ ಪುರುಷ ಸಿಬ್ಬಂದಿಯೂ ಇರಲಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮುಂದಾಗಿರುವ ಪೊಲೀಸ್ ಇಲಾಖೆಯು  ನಗರದ ಸಿಟಿ ಸೆಂಟರ್ ಅವರಣದಲ್ಲಿ ಏ.30 ರ ಮಂಗಳವಾರ ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಇದಕ್ಕೆ ಚಾಲನೆ ನೀಡಿದರು..

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago